18.1 C
Sidlaghatta
Tuesday, December 30, 2025

ಹಿರೇಬಲ್ಲ ಗ್ರಾಮದಲ್ಲಿ ರಸಗೊಬ್ಬರಗಳ ಮಳಿಗೆ, ನ್ಯಾಯಬೆಲೆ ಅಂಗಡಿ ಮತ್ತು ಶುದ್ಧ ಕುಡಿಯುವ ಘಟಕ

- Advertisement -
- Advertisement -

ಕಲ್ಮಶ ನೀರಿನಿಂದಾಗಿ ಸಾಕಷ್ಟು ಖಾಯಿಲೆಗಳು ಬರುತ್ತಿದ್ದು, ಪ್ರತಿಯೊಂದು ಗ್ರಾಮದಲ್ಲೂ ನೀರಿ ಶುದ್ಧೀಕರಣ ಘಟಕದ ಅಗತ್ಯವಿದೆ ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಹಿರೇಬಲ್ಲ ಗ್ರಾಮದಲ್ಲಿ ಶುಕ್ರವಾರ ಜಂಗಮಕೋಟೆ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ವತಿಯಿಂದ ನಿರ್ಮಿಸಿರುವ ನೂತನ ಕಟ್ಟಡದಲ್ಲಿ ರಸಗೊಬ್ಬರಗಳ ಮಳಿಗೆ, ನ್ಯಾಯಬೆಲೆ ಅಂಗಡಿ ಮತ್ತು ಶುದ್ಧ ಕುಡಿಯುವ ಘಟಕವನ್ನು ಸಾರ್ವಜನಿಕರ ಸೇವೆಗೆ ಸಮರ್ಪಿಸಿ ಅವರು ಮಾತನಾಡಿದರು.
ಕಡಿಮೆ ಬೆಲೆಗೆ ಉತ್ಕೃಷ್ಟ ವಸ್ತುಗಳಿಗೆ ಗ್ರಾಮದ ಜನತೆಗೆ ಸಿಗಬೇಕು ಮತ್ತು ಶುದ್ಧ ಕುಡಿಯುವ ನೀರು ಕೂಡ ಕಡಿಮೆ ಬೆಲೆಗೆ ಸಿಗುವಂತೆ ಮಾಡಲು ಜಂಗಮಕೋಟೆ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದವರು ಆರೂವರೆ ಲಕ್ಷ ರೂಪಾಯಿಗಳನ್ನು ವ್ಯಯಿಸಿದ್ದಾರೆ. ಗ್ರಾಮಸ್ಥರು ಇದರ ಸದುಪಯೋಗಪಡಿಸಿಕೊಳ್ಳಬೇಕು. ಪಡಿತರ ಚೀಟಿಯ ಮೂಲಕ ದವಸ ಧಾನ್ಯ ಪಡೆಯಲು ಹಿಂದೆ ಬೇರೆ ಗ್ರಾಮಗಳಿಗೆ ಹೋಗಬೇಕಿತ್ತು. ಈಗ ಇಲ್ಲೇ ನ್ಯಾಯಬೆಲೆ ಅಂಗಡಿ ಆಗಿರುವುದರಿಂದ ಜನರಿಗೆ ಅನುಕೂಲಕರವಾಗಿದೆ. ರೈತರ ವ್ಯವಸಾಯಕ್ಕೆ ಬೇಕಾದ ರಸಗೊಬ್ಬರ ಮಳಿಗೆಯನ್ನು ಗ್ರಾಮದಲ್ಲೇ ಸ್ಥಾಪಿಸಿರುವುದರಿಂದ ಇನ್ನು ದೂರದಿಂದ ಸಾಗಿಸುವ ಹಾಗೂ ಹೆಚ್ಚು ಬೆಲೆ ತೆರುವ ಅಗತ್ಯವಿಲ್ಲ. ಸಂಘದ ಜನಹಿತ ಕಾರ್ಯಗಳಿಗೆ ಎಲ್ಲರೂ ಸಹಕರಿಸಬೇಕು ಎಂದು ನುಡಿದರು.
ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಗುಡಿಯಪ್ಪ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ಉಪಾಧ್ಯಕ್ಷ ಡಿ.ಎಸ್.ಎನ್.ರಾಜು, ಎಸ್.ಎಫ್.ಸಿ.ಎಸ್.ಅಧ್ಯಕ್ಷ ರವಿಕುಮಾರ್, ಎಚ್.ಎಂ.ಮುನಿಯಪ್ಪ, ಬೈರೇಗೌಡ, ವೇಣುಗೋಪಾಲ್, ಅಶ್ವತ್ಥನಾರಾಯಣರೆಡ್ಡಿ, ಮುನಿಕೃಷ್ಣಪ್ಪ, ಎನ್.ಎಸ್.ಕೃಷ್ಣಪ್ಪ, ಉಮಾ ರವಿಕುಮಾರ್, ಆಂಜನೇಯರೆಡ್ಡಿ, ಚನ್ನಕೇಶವ, ವೆಂಕಟೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!