Home News ಹುಲ್ಲಿನ ಮೆದೆಗೆ ಬೆಂಕಿ

ಹುಲ್ಲಿನ ಮೆದೆಗೆ ಬೆಂಕಿ

0

ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಸುಮಾರು ೩೦ ಸಾವಿರ ರೂ ಬೆಲೆಬಾಳುವ ಒಣಹುಲ್ಲು ಸುಟ್ಟುಹೋಗಿರುವ ಘಟನೆ ತಾಲ್ಲೂಕಿನ ಗೆಜ್ಜಿಗಾನಹಳ್ಳಿ ಗ್ರಾಮದಲ್ಲಿ ಬುಧವಾರ ಮದ್ಯಾಹ್ನ ನಡೆದಿದೆ.
ತಾಲ್ಲೂಕಿನ ವೈ ಹುಣಸೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆಜ್ಜಿಗಾನಹಳ್ಳಿ ಗ್ರಾಮದ ಶಂಕರಪ್ಪ ಎಂಬುವವರಿಗೆ ಸೇರಿದ ಹುಲ್ಲಿನ ಮೆದೆಗೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿದೆ.
ಘಟನೆಯ ಬಗ್ಗೆ ಬೆಸ್ಕಾಂ ಇಲಾಖೆ ಹಾಗು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿ ಗಂಟೆಗಳಾದರೂ ಸ್ಥಳಕ್ಕೆ ಬಾರದೇ ಇದ್ದುದರಿಂದ ಹುಲ್ಲಿನ ಮೆದೆ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

error: Content is protected !!
Exit mobile version