25.1 C
Sidlaghatta
Sunday, October 26, 2025

101 ಸಸಿಗಳನ್ನು ನಡುವ ಕಾರ್ಯಕ್ರಮ

- Advertisement -
- Advertisement -

ಪರಿಸರ ಉಳಿದಿದ್ದರೆ ಮಾತ್ರ ಮಾನವ ಇರಲು ಸಾಧ್ಯ. ಹಸಿರೇ ಉಸಿರು. ಪರಿಸರ ಕಾಪಾಡುವುದು ಎಲ್ಲರ ಕರ್ತವ್ಯ ಎಂದು ಭಗತ್ ಸಿಂಗ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಕಾರ್ಯದರ್ಶಿ ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ದ್ಯಾವಪ್ಪನಗುಡಿ ಸರ್ಕಾರಿ ಪ್ರೌಢಶಾಲೆ ಆವರನದಲ್ಲಿ ಶುಕ್ರವಾರ ಭಗತ್ ಸಿಂಗ್ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ 101 ಸಸಿಗಳನ್ನು ನಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಾಲಿನಲ್ಲಿ ನಮ್ಮ ಸಂಘದ ವತಿಯಿಂದ ಪರಿಸರ, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಮಕ್ಕಳ ಸರ್ವತೋಮುಖ ಬೆಳವಣಿಗೆ, ಪ್ರತಿಭಾ ಅನಾವರಣ ಹಾಗೂ ಶಾಲಾಭಿವೃದ್ಧಿಯೇ ನಮ್ಮ ಗುರಿ ಎಂದು ಹೇಳಿದರು.
ಭಗತ್ ಸಿಂಗ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ದೇವರಾಜ್, ಗೌರವಾಧ್ಯಕ್ಷ ಸುಧಾಕರರೆಡ್ಡಿ, ಶಾಲಾ ಮುಖ್ಯ ಶಿಕ್ಷಕ ಸುಬ್ಬಾರೆಡ್ಡಿ, ಸಹ ಶಿಕ್ಷಕರಾದ ಶಿವಕುಮಾರಸ್ವಾಮಿ, ರಾಧಾಕೃಷ್ಣ, ಮಹಂತೇಶ್ ಅಳ್ಳೇರ್, ಸಿ.ಕೆ.ಮಂಜುಳಾ, ಕಲ್ಪನಾ, ಸುಮಲತಾ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!