ರಾಜ್ಯ ಸರ್ಕಾರದ ಜನವಿರೋಧಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿಡ್ಲಘಟ್ಟ ಆಪ್ ಕಾರ್ಯಕರ್ತರು ಗುರುವಾರ ನಗರದ ಮಿನಿ ವಿಧಾನಸೌಧದ ಮುಂಭಾಗ ‘24 ಗಂಟೆಗಳ ಉಪವಾಸ’ವನ್ನು ಕೈಗೊಳ್ಳುತ್ತಿರುವುದಾಗಿ ಆಮ್ ಆದ್ಮಿ ಪಕ್ಷದ ತಾಲ್ಲೂಕು ಸಂಚಾಲಕ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆಪ್ ಅನಿರ್ದಿಷ್ಟ ಅವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿರುವುದರ ಬೆಂಬಲವಾಗಿ ನಾವು ಉಪವಾಸವನ್ನು ಕೈಗೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳ ಕಾರ್ಯಕರ್ತರು ಬೆಂಗಳೂರಿನ ಪ್ರಾತಿಭಟನೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿಸಿದ್ದಾರೆ.