71ನೇ ವರ್ಷದ ಗಣರಾಜ್ಯೋತ್ಸವ ಸಮಾರಂಭ

- Advertisement -
- Advertisement -

ದೇಶಕ್ಕೆ ಪ್ರಪಂಚದ ಅತ್ಯಂತ ಬೃಹದಾಕಾರದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಿರ್ಮಾಣ ಮಾಡಿಕೊಂಡ ವ್ಯವಸ್ಥೆಯಲ್ಲಿ ಜೀವನ ಮಾಡುತ್ತಿರುವ ಪ್ರತಿಯೊಬ್ಬ ನಾಗರಿಕರು ಸಂವಿಧಾನದ ಆಶಯಗಳಿಗೆ ಕಟಿಬದ್ಧರಾಗಿ ಜೀವಿಸಬೇಕಾದಂತಹ ಅವಶ್ಯಕತೆ ಇದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ಭಾನುವಾರ ಆಯೋಜನೆ ಮಾಡಿಗಿದ್ದ 71ನೇ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ದೇಶದ ಏಳಿಗೆಯು ಯುವಜನತೆಯ ಮೇಲೆ ಅವಲಂಬಿಸಿದೆ. ಮೂಲಭೂತ ಸಮಸ್ಯೆಗಳನ್ನು ನಿವಾರಣೆ ಮಾಡಬೇಕಾಗಿದೆ ಯುವಶಕ್ತಿಯ ಮುಂದೆ ವ್ಯವಸ್ಥಿತವಾದ ಸಮಸ್ಯೆಗಳು ಎದುರಾಗುತ್ತಿವೆ, ಭಯೋತ್ಪಾದನೆ, ಕುಡಿಯುವ ನೀರಿನ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬೇಕಾಗಿದೆ, ಭಾರತಾಂಬೆಯ ರಕ್ಷಣೆಗೆ ನಾವೆಲ್ಲರೂ ಒಟ್ಟಾಗಬೇಕು, ಗಡಿಗಳ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಬೇಕು, ಶಾಲಾ ಮಕ್ಕಳು ಅಕ್ಷರಸ್ಥರಾಗಿ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡಬೇಕು, ಅನಕ್ಷರತೆ ತೊಲಗಬೇಕು, ದೇಶವನ್ನು ಸಾರ್ವಭೌಮ, ಸಮಾಜವಾದಿ, ಜ್ಯಾತ್ಯಾತೀತ ಮತ್ತು ಪ್ರಜಾಪ್ರಭುತ್ವ ಗಣತಂತ್ರವನ್ನಾಗಿ ಮಾಡಲು ಎಲ್ಲಾ ಪ್ರಜೆಗಳು ಸಂಕಲ್ಪ ಮಾಡಬೇಕಾಗಿದೆ, ದೇಶದಲ್ಲಿನ ಜನತೆಯನ್ನು ಭಯಬೀತಗೊಳಿಸುವಂತಹ ಭಯೋತ್ಪಾದನೆಯನ್ನು ಹತ್ತಿಕ್ಕುವಂತಹ ಪ್ರಯತ್ನಕ್ಕೆ ನಮ್ಮೆಲ್ಲರ ಸಹಕಾರ ನೀಡಬೇಕು ಎಂದರು.
ಧ್ವಜಾರೋಹಣವನ್ನು ನೆರವೇರಿಸಿದ ತಹಶೀಲ್ದಾರ್ ಎಂ.ದಯಾನಂದ್ ಮಾತನಾಡಿ, ನಮ್ಮ ಶಿಡ್ಲಘಟ್ಟ ತಾಲ್ಲೂಕು ಅತಿಹೆಚ್ಚು ರಕ್ತದಾನ ಮಾಡುವ ಮೂಲಕ ಮಾನವೀಯ ತಾಲ್ಲೂಕೆಂದು ಪರಿಗಣಿತವಾಗಿದೆ. ಸಮಾನತೆ, ಸಹೋದರತ್ವ, ಪರಸ್ಪರ ಪ್ರೀತಿ ಆದರಗಳನ್ನು ನಿರ್ಮಾಣ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ, ನಾಡಿನ ಮಕ್ಕಳ ಅಪೌಷ್ಟಿಕತೆ ನಿವಾರಣೆ, ದುರ್ಬಲ ವರ್ಗದ ಜನರ ಅಭಿವೃದ್ದಿಯು ಅವಶ್ಯಕತೆಯಿದೆ ಎಂದರು.
ಈ ಸಂಧರ್ಭದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ಆಯೋಜನೆ ಮಾಡಲಾಗಿತ್ತು. ವಾಸವಿ, ಶಾರದಾ ಮತ್ತು ಸಾಯಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬಿಂಬಿಸುವ ನೃತ್ಯರೂಪಕಗಳನ್ನು ಪ್ರದರ್ಶಿಸಿದರು. 50 ಬಾರಿ ರಕ್ತದಾನ ಮಾಡಿರುವ ಶಿರಸ್ತೆದಾರ್ ಮಂಜುನಾಥ್, 40 ಬಾರಿ ರಕ್ತದಾನ ಮಾಡಿರುವ ಆರೋಗ್ಯ ಇಲಾಖೆಯ ಟಿ.ಟಿ.ನರಸಿಂಹಪ್ಪ, ಯೂನಿಟಿ ಸಿಲ್ ಸಿಲಾ ಫೌಂಡೇಷನ್ ಅಧ್ಯಕ್ಷ ಅಸದ್, ಉತ್ತಮವಾಗಿ ಕಾರ್ಯನಿರ್ವಹಿಸಿರುವ ಪಿ.ಡಿ.ಒ ಗಳನ್ನು ಸನ್ಮಾನಿಸಲಾಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಇಒ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ರೈತಸಂಘದ ರಾಜ್ಯ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!