0

ಶಿಡ್ಲಘಟ್ಟದಲ್ಲಿ ಶುಕ್ರವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿ ತಾಲ್ಲೂಕಿನಲ್ಲಿರುವ ಖಾಸಗಿ ಶಾಲೆಗಳು ಸರ್ಕಾರದ ಆದೇಶಕ್ಕಿಂತ ಹೆಚ್ಚು ಹಣವನ್ನು ಪೋಷಕರಿಂದ ವಸೂಲಿ ಮಾಡುವುದನ್ನು ತಡೆಯಬೇಕೆಂದು ಕೋರಿದರು. ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್‌, ಪ್ರತೀಶ್‌, ಜೆ.ಎಸ್‌.ವೆಂಕಟಸ್ವಾಮಿ, ಪುರುಷೋತ್ತಮ್‌ ಮತ್ತಿತರರು ಹಾಜರಿದ್ದರು.