
Binnamangala, Sidlaghatta Taluk : ಶಿಡ್ಲಘಟ್ಟ ತಾಲ್ಲೂಕಿನ ಬಿನ್ನಮಂಗಲ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಆಗಸ್ಟ್ 16 ಮತ್ತು 17ರಂದು ಎರಡು ದಿನಗಳ ಕಾಲ ನಡೆದ ಧ್ವಜಸ್ತಂಭ ಪ್ರತಿಷ್ಠಾ ಮಹೋತ್ಸವ ಭಕ್ತಿಭಾವ ಹಾಗೂ ಸಡಗರದಿಂದ ಸಂಪನ್ನಗೊಂಡಿತು. ಗಣಪತಿ ಪೂಜೆ, ಪುಣ್ಯಾಹವಾಚನ, ಕಳಶಾರಾಧನೆ, ಹೋಮ-ಹವನ, ಧ್ವಜಸ್ತಂಭ ಪ್ರತಿಷ್ಠೆ, ಕುಂಭಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಶ್ರೀ ಆಂಜನೇಯಸ್ವಾಮಿಗೆ ಪುಷ್ಪಾಲಂಕಾರ ಮಾಡಿ ವಿಶೇಷ ಪೂಜಾ ಸೇವೆಗಳನ್ನು ಸಲ್ಲಿಸಲಾಯಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ಧ್ವಜಸ್ತಂಭ ಪ್ರತಿಷ್ಠಾಪನೆ ನೆರವೇರಿದ ಸಂದರ್ಭದಲ್ಲಿ ದೇವಾಲಯದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿತ್ತು. ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆದು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.
ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಬಿನ್ನಮಂಗಲ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಬಿ.ಆರ್. ನರಸಿಂಹಪ್ಪ, ಮಂಜುನಾಥ್, ಬಿ.ವಿ. ದ್ಯಾವಪ್ಪ, ಬಿ.ವಿ. ಶಿವರಾಜ್, ಹನುಮಂತರಾಯಪ್ಪ, ಮುನಿಶಾಮಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.
In English: Sri Anjaneyaswamy Temple in Binnamangala village held a two-day flagpole consecration (Dwajasthambha Pratishtha) festival on August 16-17, with Ganapati puja, homa-havana, kumbhabhisheka, and other rites, drawing devotees from surrounding villages for darshan and a community feast.
ಇತ್ತೀಚೆಗೆ ನಡೆದ ಕೋಟೆ ಶ್ರೀ ಸೋಮೇಶ್ವರಸ್ವಾಮಿ ದೇವಾಲಯ ಪುನರ್ ನಿರ್ಮಾಣ ಕುರಿತ ವರದಿಯನ್ನೂ ನೋಡಿ.