ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ಭಾರತ್ ಬಂದ್ ಗೆ ನಗರ ಸೇರಿದಂತೆ ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಶಿಡ್ಲಘಟ್ಟ ನಗರದಲ್ಲಿ ಸೋಮವಾರ ಮುಂಜಾನೆಯಿಂದಲೇ ರೈತ ಮುಖಂಡರೂ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ರಸ್ತೆಗಿಳಿದು ಪಂಜಿನ ಮೆರವಣಿಗೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಕೆಲ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದರಾದರೂ ಬಹುತೇಕ ವ್ಯಾಪಾರ ವಹಿವಾಟು ಎಂದಿನಂತೆ ನಡೆಯುವ ಜೊತೆಗೆ ಬಸ್, ಆಟೋ, ಟ್ಯಾಕ್ಸಿ, ಎಂದಿನಂತೆ ಕಾರ್ಯನಿರ್ವಹಿಸಿದವು.
ಸರ್ಕಾರಿ ಕಚೇರಿಗಳು ಸೇರಿದಂತೆ ಶಾಲಾ ಕಾಲೇಜು, ಗೂಡು ಮಾರುಕಟ್ಟೆ ಎಂದಿನಂತೆ ಕಾರ್ಯನಿರ್ವಹಿಸಿದವು. ತಾಲ್ಲೂಕು ವಕೀಲರ ಸಂಘ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi