ಎಸ್.ಐ.ಆರ್. ಮಹಾ ಅಭಿಯಾನಕ್ಕೆ ಬಿಜೆಪಿಯಿಂದ ಚಾಲನೆ, ಮನೆ-ಮನೆ ಜಾಗೃತಿ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಎಸ್.ಐ.ಆರ್. ಮಹಾ ಅಭಿಯಾನಕ್ಕೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ಶನಿವಾರ ಚಾಲನೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಏನು ಮಾಡಬೇಕು?

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಪರಿಷ್ಕರಿಸುವ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು. ಅರ್ಹ ಮತದಾರರು ಎಸ್.ಐ.ಆರ್. ಸಂಬಂಧಿತ ಅರ್ಜಿಗಳನ್ನು ಸಕಾಲದಲ್ಲಿ ಸಲ್ಲಿಸಿ ತಮ್ಮ ಮಾಹಿತಿಯನ್ನು ಸರಿಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಪಕ್ಷದ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ಈ ಕುರಿತು ಜನರಿಗೆ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ತಿಳಿಸಿದರು.

ಬಳಿಕ ಅವರು 50ಕ್ಕೂ ಹೆಚ್ಚು ಮನೆಗಳಿಗೆ ಖುದ್ದು ಭೇಟಿ ನೀಡಿ ಎಸ್.ಐ.ಆರ್. ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಶೇ.100 ಅರ್ಜಿ ಸಲ್ಲಿಕೆ: ಬಿಎಲ್‌ಒ ಸನ್ಮಾನ

ನಗರದ 2ನೇ ವಾರ್ಡ್‌ನ ಬೂತ್ ಸಂಖ್ಯೆ 129ರಲ್ಲಿ ಎಸ್.ಐ.ಆರ್. ಅರ್ಜಿಗಳು ಶೇ.100ರಷ್ಟು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ಬಿ.ಎಲ್.ಒ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ನಗರ ಮಂಡಲ ಅಧ್ಯಕ್ಷ ದೇವರಾಜ್, ನರೇಶ್, ಆಂಜನೇಯಗೌಡ, ಸುರೇಂದ್ರಗೌಡ, ಚೆಲುವರಾಜ್, ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

In English: BJP’s district unit president launched the party’s SIR (Special Intensive Revision) voter-list campaign at Nagareshwara Kalyana Mantapa, Sidlaghatta, urging eligible voters to submit SIR forms on time and correct their electoral details. Party workers are conducting door-to-door outreach; a booth recording 100% SIR form submission had its BLO felicitated at the event.

FAQ

ಎಸ್.ಐ.ಆರ್. ಎಂದರೇನು?
ಎಸ್.ಐ.ಆರ್. ಎಂದರೆ ವಿಶೇಷ ತೀವ್ರ ಪರಿಷ್ಕರಣೆ (Special Intensive Revision) — ಮತದಾರರ ಪಟ್ಟಿಯನ್ನು ನಿಖರಗೊಳಿಸುವ ಚುನಾವಣಾ ಪ್ರಕ್ರಿಯೆ.

ಮತದಾರರು ಏನು ಮಾಡಬೇಕು?
ಅರ್ಹ ಮತದಾರರು ಎಸ್.ಐ.ಆರ್. ಅರ್ಜಿಗಳನ್ನು ಸಕಾಲದಲ್ಲಿ ಸಲ್ಲಿಸಿ ತಮ್ಮ ಮಾಹಿತಿಯನ್ನು ಸರಿಪಡಿಸಿಕೊಳ್ಳಬೇಕು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!