
Sidlaghatta : ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾಗಿ ತಾಲ್ಲೂಕಿನ ಅಬ್ಲೂಡು ಗ್ರಾಮದ ಡಿ.ಫಣೀಂದ್ರ ಪ್ರಸಾದ್ ಹಾಗೂ ಮಳಮಾಚನಹಳ್ಳಿ ಗ್ರಾಮದ ಎಂ.ಎ.ಸುನಿಲ್ ಕುಮಾರ್ ನೇಮಕಗೊಂಡಿದ್ದಾರೆ.
ಕನ್ನಡ ಅಭಿವೃದ್ದಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರವು ಪ್ರತಿ ಜಿಲ್ಲೆಯಲ್ಲೂ ಐದು ಮಂದಿಯನ್ನೊಳಗೊಂಡ ಕನ್ನಡ ಜಾಗೃತಿ ಸಮಿತಿಗಳನ್ನು ಸರ್ಕಾರ ರಚಿಸಿದೆ.
ತಾಲ್ಲೂಕಿನ ಫಣೀಂದ್ರ ಪ್ರಸಾದ್ ಮತ್ತು ಸುನಿಲ್ ಕುಮಾರ್ ಅವರನ್ನು ನೇಮಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಳಿತ ಕನ್ನಡ ಶಾಖೆಯ ಸರ್ಕಾರದ ಅನ ಕಾರ್ಯದರ್ಶಿ ಕೆ.ಆರ್.ರಮೇಶ್ ಆದೇಶಿಸಿದ್ದಾರೆ.