ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಥಮಿಕ ಶಾಲೆಯ ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಅವರಿಗೆ ಬೆಂಗಳೂರಿನ ಗಾಂಧಿಭವನದ ಮೈಲಾರ ಮಹಾದೇವ ಸಭಾಂಗಣದಲ್ಲಿ ನಡೆದ ಗಾಂಧಿಜಯಂತಿ ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಿರಿಯ ಗಾಂಧಿವಾದಿ ಡಾ.ಎಸ್.ಎನ್.ಸುಬ್ಬರಾವ್, ಎನ್ಎಸ್ಎಸ್ ಜಂಟಿ ಕಾರ್ಯದರ್ಶಿ ಡಾ.ಗಣನಾಥಶೆಟ್ಟಿಎಕ್ಕಾರು, ರಾ.ಸೇ.ಯೋ. ರಾಜ್ಯ ಕಾರ್ಯಕ್ರಮಾಧಿಕಾರಿ ಡಾ.ಪೂರ್ಣಿಮಾಜೋಗಿ ಹಾಜರಿದ್ದರು