Home News ದ.ರಾ.ಬೇಂದ್ರೆ ಅವರ ಜನ್ಮ ದಿನಾಚರಣೆ

ದ.ರಾ.ಬೇಂದ್ರೆ ಅವರ ಜನ್ಮ ದಿನಾಚರಣೆ

0
Da Ra Bendre Birth Anniversary Celebration KaSaPa

Sidlaghatta: ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳಲ್ಲಷ್ಟೆ ಅಲ್ಲ ಯುವಜನರು ಮತ್ತು ಹಿರಿಯರು ಸೇರಿದಂತೆ ಎಲ್ಲ ವರ್ಗದವರಲ್ಲೂ ಪುಸ್ತಕ ಓದುವ ಅಭ್ಯಾಸ ಮತ್ತು ಹವ್ಯಾಸ ಕಡಿಮೆ ಆಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿ ಗೌಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಸಾಪದಿಂದ ಹಮ್ಮಿಕೊಂಡಿದ್ದ ಅಂಬಿಕಾತನಯದತ್ತ ದ.ರಾ.ಬೇಂದ್ರೆ ಅವರ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ನಮ್ಮ ನಾಡು ಐತಿಹಾಸಿಕ, ಪೌರಾಣಿಕ, ಪ್ರಾಕೃತಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಎಷ್ಟು ಉನ್ನತ ಸ್ಥಿತಿಯಲ್ಲಿ ಇದ್ದೇವೋ ಅದೇ ರೀತಿ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ನಮ್ಮಲ್ಲಿ ಕೊರತೆಯಿಲ್ಲ. ಇಡೀ ಜಗತ್ತಿನ ಸಾಹಿತ್ಯ ಕ್ಷೇತ್ರದ ಗಮನ ಸೆಳೆದಂತ ಸಾಹಿತಿಗಳನ್ನು ನಮ್ಮ ನಾಡು ನೀಡಿದೆ.

ಅಂತಹವರಲ್ಲಿ ದ.ರಾ.ಬೇಂದ್ರೆ ಅವರು ಕೂಡ ಮುಂಚೂಣಿ ಸ್ಥಾನದಲ್ಲಿದ್ದು ಅವರ ನಾಕು ತಂತಿಗೆ ಸಾಹಿತ್ಯಕ್ಕೆ ಸಾಹಿತ್ಯ ಕ್ಷೇತ್ರದಲ್ಲಿ ಅತ್ತ್ಯುನ್ನತ ಜ್ಞಾನಪೀಠ ಪ್ರಶಸ್ತಿ ಬಂದಿರುವುದು ಅವರಷ್ಟೆ ಅಲ್ಲ ಅಂತಹ ಮಹಾನ್ ಸಾಹಿತಿಯನ್ನು ಪಡೆದಂತ ನಾವೆಲ್ಲರೂ ಕೂಡ ಖುಷಿ, ಹೆಮ್ಮೆ ಪಡುವ ವಿಚಾರವಾಗಿದೆ ಎಂದರು.

ದ.ರಾ.ಬೇಂದ್ರೆ ಅವರು ಎಲ್ಲ ವರ್ಗದವರೂ ಓದುವಂತ ಸಾಹಿತ್ಯವನ್ನು ರಚಿಸಿದ್ದು ಅವುಗಳನ್ನು ಎಲ್ಲರೂ ಓದಬೇಕು, ಅವರು ಸಾಹಿತ್ಯದ ಮೂಲಕ ನೀಡಿದ ಸಂದೇಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ಬದುಕನ್ನು ಇನ್ನಷ್ಟು ಉತ್ತಮಪಡಿಸಿಕೊಳ್ಳಬೇಕೆಂದು ಕೋರಿದರು.

ಮುಖ್ಯ ಶಿಕ್ಷಕ ಎಂ.ದೇವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ ದ.ರಾ.ಬೇಂದ್ರೆ ಅವರು ಜೀವನದ ಹಾದಿ, ಅವರ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ವಿವರಿಸಿದರು.

ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ, ಕವನ ವಾಚನ, ಗಾಯನ ಸ್ವರ್ಧೆಯಲ್ಲಿ ವಿಜೇತರಾದ ವಿನಯ್ ಕುಮಾರ್, ರಾಕೇಶ್, ವರ್ಷಿಣಿ, ಮೋಹಿತ್, ಪೃಥ್ವಿ, ಸಹನ, ಭಾನುಪ್ರಿಯ, ಅಶ್ವಿನಿ, ಗಾನವಿ, ಪಲ್ಲವಿ, ಕೀರ್ತನ ಇನ್ನಿತರೆ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.

ಎಸ್‌.ಡಿ.ಎಂ.ಸಿ ಅಧ್ಯಕ್ಷ ಎಂ.ವೆಂಕಟಶಿವಣ್ಣ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಎನ್.ಸುಂದರ್, ಟಿ.ಟಿ.ನರಸಿಂಹಪ್ಪ, ರಾಮಾಂಜನೇಯ, ಡಿ.ಎಸ್.ಸತ್ಯನಾರಾಯಣ ರಾವ್, ಕವಿಗಳಾದ ಜಿ.ಎನ್.ಶಾಮ ಸುಂದರ್, ಶಿಕ್ಷಕ ಪ್ರಭಾಕರ್, ಎಂ. ಮಂಜುನಾಥ್, ಕೃಪ, ನಳಿನಾಕ್ಷಿ, ಶ್ಯಾಮಲ, ಸುಪ್ರಿಯ, ಶ್ವೇತ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version