ಡಿಸಿಸಿ ಬ್ಯಾಂಕ್ ಜಿಲ್ಲೆಯ ಮಹಿಳೆಯರಿಗೆ ಬಡ್ಡಿ ರಹಿತ ಸಾಲವನ್ನು ನೀಡುವ ಮೂಲಕ ನೆರವಿಗೆ ನಿಂತಿದೆ

- Advertisement -
- Advertisement -

ತಾಲ್ಲೂಕಿನ ಹಂಡಿಗನಾಳ ಗ್ರಾಮದಲ್ಲಿರುವ ಕೆವಿ ಭವನದಲ್ಲಿ ಬುಧವಾರ ಆಯೋಜಿಸಿದ್ದ ಎಸ್.ಎಫ್.ಸಿ.ಎಸ್ ಹಾಗೂ ವಿ.ಎಸ್.ಎಸ್.ಎನ್ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಸಿಇಓಗಳ ಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಾಲ ಸೌಲಭ್ಯ ಕಲ್ಪಿಸಿ ಅವರ ಆರ್ಥಿಕ ಮಟ್ಟವನ್ನು ಸುಧಾರಿಸಿ ಕ್ಷೇತ್ರವನ್ನು ಬಡತನದಿಂದ ಮುಕ್ತ ಮಾಡಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ತಾಲ್ಲೂಕಿನ ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಗುಂಪಿನ ಸದಸ್ಯರು ಪಡೆದಿರುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮೂಲಕ ಡಿಸಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

 ಸಭೆಯಲ್ಲಿ ಎಸ್.ಎಫ್.ಸಿ.ಎಸ್ ಹಾಗೂ ವಿ.ಎಸ್.ಎಸ್.ಎನ್ ಸಂಘಗಳ ಸ್ಥಿತಿಗತಿಗಳ ಕುರಿತು ಮುಕ್ತವಾಗಿ ಸಂವಾದ ನಡೆಸಿ, ಸಂಘಗಳು ಮತ್ತು ಬ್ಯಾಂಕ್‌ಗಳನ್ನು ಸಕ್ರೀಯಗೊಳಿಸಿ, ಅದರ ಮೂಲಕ ಬಡವರಿಗೆ ಸಾಲ ಸೌಲಭ್ಯ ಒದಗಿಸಲು ಆಂದೋಲನ ನಡೆಸಬೇಕೆಂದು ಮನವಿ ಮಾಡಿದರು.

 ಶಾಸಕ ವಿ.ಮುನಿಯಪ್ಪ ಮಾತನಾಡಿ, ಕೊರೊನಾ ಸಂಕಷ್ಟದಲ್ಲಿ ಡಿಸಿಸಿ ಬ್ಯಾಂಕ್ ಜಿಲ್ಲೆಯ ಸುಮಾರು ಇಪ್ಪತ್ತು ಸಾವಿರ ಮಹಿಳೆಯರಿಗೆ ಬಡ್ಡಿ ರಹಿತ ಸಾಲವನ್ನು ನೀಡುವ ಮೂಲಕ ನೆರವಿಗೆ ನಿಂತಿದೆ. ಪಡೆದ ಸಾಲವನ್ನು ನಿಗತಿತ ಸಮಯಕ್ಕೆ ಕಟ್ಟುವ ಮೂಲಕ ಪುನಃ ಸಾಲವನ್ನು ಪಡೆಯಬಹುದು. ಮಹಿಳೆಯರು ಕುಟುಂಬವನ್ನು ರಕ್ಷಿಸಲು ಇದು ಸಹಾಯವಾಗಲಿದೆ ಎಂದರು.

 ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್ ಕೋಚಿಮಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಸುಭ್ರಮಣಿ, ಜಂಗಮಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಮುಖಂಡರಾದ ಕೆ.ಎಂ.ವೆಂಕಟೇಶ್, ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ ಆನಂದ್, ಮೇಲ್ವಿಚಾರಕ ಶ್ರೀನಾಥ್ ಹಾಗೂ ಎಸ್.ಎಫ್.ಸಿ.ಎಸ್ ಹಾಗೂ ವಿ.ಎಸ್.ಎಸ್.ಎನ್ ಸಂಘಗಳ ಅಧ್ಯಕ್ಷರು,ನಿರ್ದೇಶಕರು,ಸಿಇಓಗಳ ಸಭೆಯಲ್ಲಿ ಭಾಗವಹಿಸಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!