ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳೂಟಿಯ ಲಕ್ಷ್ಮಮ್ಮ ರವರಿಗೆ 25 ಸಾವಿರ ರೂಗಳ ಸಹಾಯಧನ ಹಸ್ತಾಂತರಿಸಲಾಯಿತು. ರೈತ ಎಚ್.ಕೆ.ಸುರೇಶ್, ಜಿಲ್ಲಾ ನಿರ್ದೇಶಕ ಬಿ.ವಸಂತ್, ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಮೇಲ್ವಿಚಾರಕಿ ಜ್ಯೋತಿ, ಸೇವಾಪ್ರತಿನಿಧಿ ವೆಂಕಟಲಕ್ಷ್ಮಿ, ಒಕ್ಕೂಟದ ಅಧ್ಯಕ್ಷರಾದ ನಳಿನಾ ಹಾಜರಿದ್ದರು.