20.9 C
Sidlaghatta
Tuesday, July 15, 2025

ಉಚಿತ ಆರೋಗ್ಯ ತಪಾಸಣಾ ಶಿಬಿರ

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಕಾಶ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿಯ ಮುಖಂಡರ ನೆರವಿನೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

 ಕಿವಿ, ಮೂಗು ಮತ್ತು ಗಂಟಲು ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಫಿಜಿಶಿಯನ್, ಕಣ್ಣಿನ ತಜ್ಞರು, ಮಕ್ಕಳ ತಜ್ಞರು, ದಂತ ವೈದ್ಯ ತಜ್ಞರು, ಮೂಳೆ ಕೀಲು ತಜ್ಞರು, ಚರ್ಮ ರೋಗ ತಜ್ಞರು, ಸ್ತ್ರೀ ರೋಗ ತಜ್ಞರು ಆಗಮಿಸಿದ್ದರು. ಉಚಿತವಾಗಿ ಬಿ.ಪಿ. ಸಕ್ಕರೆ ಖಾಯಿಲೆ, ಇಸಿಜಿ ಪರೀಕ್ಷೆಗಳನ್ನು ನಡೆಸಲಾಯಿತು.

 ಸುಮಾರು 180 ಮಂದಿ ಗ್ರಾಮಸ್ಥರು ಆಗಮಿಸಿ ಚಿಕಿತ್ಸೆಯನ್ನು ಪಡೆದುಕೊಂಡರು. ಕಣ್ಣಿನ ಡ್ರಾಪ್ಸ್, ಕೈಕಾಲು ನೋವಿಗೆ ಮಾತ್ರೆಗಳು, ಮಲ್ಟಿವಿಟಮಿನ್ ಸಿರಪ್ ಗಳು, ನೋವು ನಿವಾರಕ ಮುಲಾಮು, ಗ್ಯಾಸ್ಟ್ರಿಕ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಯಿತು.

 ಶಿಬಿರದ ಆಯೋಜಕರಾದ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ, ವಿ.ಎಸ್.ಗೋಪಾಲಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರೆಡ್ಡಿ, ಸದಸ್ಯೆ ಗೀತಾ ವಿಶ್ವನಾಥ್, ಎಂ.ಪಿ.ಸಿ.ಎಸ್ ಅಧ್ಯಕ್ಷ ದೇವರಾಜ್, ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಶಾಲೆಯ ಶಿಕ್ಷಕರಾದ ಎಲ್.ನಾಗಭೂಷಣ್, ಎಂ.ಎ.ರಾಮಕೃಷ್ಣ, ಜಿ.ಗಂಗಶಿವಪ್ಪ, ಸಿ.ಆರ್.ಪಿ ಪ್ರೇಮ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!