Home News ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

0
0
Sidlaghatta Government First Grade College Felicitation

Sidlaghatta : ಶಿಡ್ಲಘಟ್ಟ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗೂ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಶುಕ್ರವಾರ ನಡೆಯಿತು.

ಶಿಸ್ತುಬದ್ಧ ಅಧ್ಯಯನದ ಸಲಹೆ

ಕಾರ್ಯಕ್ರಮ ಉದ್ಘಾಟಿಸಿದ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್. ಸುಬ್ಬಾರೆಡ್ಡಿ, ಪಿಯುಸಿ ಹಂತ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರಮುಖ ಘಟ್ಟವೆಂದೂ, ಆರಂಭದಿಂದಲೇ ಶಿಸ್ತುಬದ್ಧ ಅಧ್ಯಯನದ ಅಭ್ಯಾಸ ರೂಢಿಸಿಕೊಳ್ಳಬೇಕೆಂದೂ ಹೇಳಿದರು. ಸ್ಪಷ್ಟ ಗುರಿ ಹೊಂದಿ ನಿರಂತರ ಪರಿಶ್ರಮ ಪಟ್ಟರೆ ಉತ್ತಮ ಸಾಧನೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಬಟ್ಲಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮುನಿರೆಡ್ಡಿ, ಸಮಯದ ಸದ್ಬಳಕೆ, ನಿಯಮಿತ ಪುನರಾವರ್ತನೆ ಹಾಗೂ ಯೋಜಿತ ಅಧ್ಯಯನದಿಂದ ಉತ್ತಮ ಫಲಿತಾಂಶ ಗಳಿಸಬಹುದೆಂದು ತಿಳಿಸಿದರು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಿ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು

ಕಾಲೇಜಿನ ಪ್ರಾಂಶುಪಾಲ ಸಿ. ವೆಂಕಟಶಿವಾರೆಡ್ಡಿ, ಉತ್ತಮ ಅಂಕ ಗಳಿಸುವುದರ ಜೊತೆಗೆ ಸತ್ಯ, ಪ್ರಾಮಾಣಿಕತೆ, ಶಿಸ್ತು ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಗುರುಹಿರಿಯರನ್ನು ಗೌರವಿಸುವುದು, ಕಾಲೇಜಿನ ನಿಯಮಗಳನ್ನು ಪಾಲಿಸುವುದು ಹಾಗೂ ಸಹಪಾಠಿಗಳೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಿಕೊಳ್ಳುವುದು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಕಾಲೇಜಿನ ಪರವಾಗಿ ಸ್ವಾಗತಿಸಲಾಯಿತು.

ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಇಶ್ರತ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಲಕ್ಷ್ಮಣಮೂರ್ತಿ, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಎಚ್.ಸಿ. ಮುನಿರಾಜು, ಹಿರಿಯ ಉಪನ್ಯಾಸಕರಾದ ಡಿ. ಲಕ್ಷ್ಮಯ್ಯ, ನರಸಿಂಹ ರೆಡ್ಡಿ, ಶ್ರೀಕೃಷ್ಣ ಪರಮಾತ್ಮ, ಬಾಬಾ ಜಾನ್, ಮೆಹಬೂಬ್ ಖಾನ್, ರಮೇಶ್, ಶ್ರೀಧರ್, ಚಂದ್ರು, ನಾಗಾರ್ಜುನ, ಅನ್ನಪೂರ್ಣ, ಸತೀಶ್, ನಹಿದಾ ಬೇಗಂ, ಸಾವಿತ್ರಮ್ಮ, ನಾಗವೇಣಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

In English: Government PU College Sidlaghatta held a felicitation for top scorers in the 2025-26 second PUC exams and a welcome ceremony for incoming first-year PUC students on Friday. Speakers, including state government employees’ association secretary K.N. Subbareddy and the college’s principals, urged students to build disciplined study habits, manage time well, and combine academic performance with honesty, discipline, and respect for teachers.

Sidlaghatta WhatsApp Channel Group

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here