ಸರ್ಕಾರಿ ನೌಕರರ ಸಂಘಕ್ಕೆ ₹5.17 ಲಕ್ಷ ಉಳಿತಾಯ: ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆಯಲ್ಲಿ ₹5.17 ಲಕ್ಷ ಉಳಿತಾಯವಿದ್ದು, ಈ ಮೊತ್ತವನ್ನು ನೌಕರರ ಕಲ್ಯಾಣ ಕಾರ್ಯಕ್ರಮಗಳು ಹಾಗೂ ಸಂಘದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ತಿಳಿಸಿದರು.

ನಗರದ ತಾಲ್ಲೂಕು ಸರ್ಕಾರಿ ನೌಕರರ ಭವನದಲ್ಲಿ ಗುರುವಾರ ನಡೆದ ಸಂಘದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಸದಸ್ಯರ ಸಹಕಾರ ಹಾಗೂ ಪದಾಧಿಕಾರಿಗಳ ಪ್ರಾಮಾಣಿಕ ಪ್ರಯತ್ನದಿಂದ ಸಂಘ ಆರ್ಥಿಕವಾಗಿ ಸದೃಢವಾಗಿದೆ. ನೌಕರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸಂಘ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದರು.

ತಾಲ್ಲೂಕಿನ ವಿವಿಧ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರ ಸಹಕಾರದಿಂದ ಶಾಸಕರ ಕ್ಷೇತ್ರ ಅಭಿವೃದ್ಧಿ ನಿಧಿಯಡಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಸರ್ಕಾರಿ ನೌಕರರ ಭವನದ ಕಾಮಗಾರಿ ವೇಗವಾಗಿ ನಡೆಯುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಂಡು ನೌಕರರ ಬಳಕೆಗೆ ಲಭ್ಯವಾಗಲಿದೆ ಎಂದು ಹೇಳಿದರು.

ಭವನವು ಸರ್ಕಾರಿ ನೌಕರರ ಸಭೆಗಳು, ತರಬೇತಿ ಕಾರ್ಯಕ್ರಮಗಳು ಹಾಗೂ ಸಂಘದ ಚಟುವಟಿಕೆಗಳಿಗೆ ಶಾಶ್ವತ ಕೇಂದ್ರವಾಗಲಿದೆ. ಇದರಿಂದ ನೌಕರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಮಹಾಸಭೆಯಲ್ಲಿ ಏನೇನು ಚರ್ಚೆಯಾಯಿತು?

ಮಹಾಸಭೆಯಲ್ಲಿ ಸಂಘದ ಹಿಂದಿನ ಸಾಲಿನ ಆಡಳಿತ ವರದಿ, ವಾರ್ಷಿಕ ಲೆಕ್ಕಪತ್ರ, ಆದಾಯ–ವೆಚ್ಚದ ವಿವರ ಹಾಗೂ ಮುಂದಿನ ಸಾಲಿನ ಕಾರ್ಯಯೋಜನೆಗಳನ್ನು ಮಂಡಿಸಿ ಅಂಗೀಕರಿಸಲಾಯಿತು. ನೌಕರರ ಸೇವಾ ಹಿತಾಸಕ್ತಿ, ಆಡಳಿತಾತ್ಮಕ ಸಮಸ್ಯೆಗಳು, ನಿವೃತ್ತಿ ಸೌಲಭ್ಯಗಳು, ವಿವಿಧ ಇಲಾಖೆಗಳ ಸಮನ್ವಯ, ಸದಸ್ಯತ್ವ ವಿಸ್ತರಣೆ ಹಾಗೂ ಸಂಘದ ಆರ್ಥಿಕ ಸ್ಥಿರತೆ ಕುರಿತು ಚರ್ಚೆ ನಡೆಯಿತು.

ನೌಕರರ ಸಮಸ್ಯೆಗಳ ಪರಿಹಾರ ಹಾಗೂ ಸದಸ್ಯರ ಕಲ್ಯಾಣಕ್ಕಾಗಿ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸದಸ್ಯರು ಸಲಹೆ ನೀಡಿದರು. ನೌಕರರ ಏಕತೆ ಹಾಗೂ ಸಂಘಟಿತ ಪ್ರಯತ್ನದಿಂದ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬಹುದು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಸಂಘದ ಉಪಾಧ್ಯಕ್ಷ ಮೇಲೂರು ಮಂಜುನಾಥ್, ಕಾರ್ಯದರ್ಶಿ ಕೆಂಪೇಗೌಡ, ಹಿರಿಯ ಉಪಾಧ್ಯಕ್ಷ ಮಧುಸೂದನ್, ಖಜಾಂಚಿ ವಸಂತ್ ಕುಮಾರ್, ನಿರ್ದೇಶಕ ಟಿಪ್ಪು ಸುಲ್ತಾನ್, ರಾಜ್ಯ ಪರಿಷತ್ ಸದಸ್ಯ ಟಿ.ಟಿ. ನರಸಿಂಹಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಂದರಾಚಾರಿ, NPS ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಕಾರ್ಯದರ್ಶಿ ನರಸಿಂಹರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ. ವೆಂಕಟರೆಡ್ಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚೆಗೆ ಸಂಘದ ಸದಸ್ಯರು NPS ರದ್ದು, OPS ಜಾರಿಗೆ ಒತ್ತಾಯಿಸಿ ಬೆಂಗಳೂರು ಚಲೊ ಪ್ರತಿಭಟನೆ ನಡೆಸಿದ್ದರು.

In English: The Karnataka State Government Employees Association (Sidlaghatta taluk branch) reported savings of ₹5.17 lakh, to be used for employee welfare programs and association development, president KN Subbareddy said at its 2025-26 annual general meeting held at the Taluk Government Employees Bhavan. He noted that construction of the new employees’ bhavan, funded under the MLA’s constituency development fund, is progressing fast and will soon be available for use. The National Pension System (NPS) employees’ association was also represented at the meeting.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!