ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಲ್.ವಿ.ವೆಂಕಟರೆಡ್ಡಿ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ ಅವರು ಮಾತನಾಡಿದರು.
ಸಮಾಜದ ಅಂಗವಾಗಿರುವ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ. ದಾನಿಗಳು ಮತ್ತು ಸಮಾಜಸೇವಕರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಅವರು ತಿಳಿಸಿದರು.
ಡಿಡಿಪಿಐ ಕಚೇರಿ ಆಂಗ್ಲ ವಿಷಯ ನಿರೀಕ್ಷಕಿ ಕೃಷ್ಣಕುಮಾರಿ ಮಾತನಾಡಿ, ಆನ್ಲೈನ್ ಶಿಕ್ಷಣ ನೀಡಿದರು ಸಹ ಭೌತಿಕವಾಗಿ ನಡೆಯುವ ತರಗತಿಗಳಿಂದ ಕಲಿಕೆ ಉತ್ತಮವಾಗಿ ನಡೆಯುತ್ತದೆ. ಈಗಾಗಲೇ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಸರ್ಕಾರಿ ಶಾಲೆಗಳನ್ನು ಆರಂಭಿಸಲು ಅವಕಾಶ ಕಲ್ಪಿಸಿದ್ದು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಯ್ಯ, ಉಪಾಧ್ಯಕ್ಷೆ ರತ್ನಮ್ಮ, ಸದಸ್ಯ ಮುನಿರೆಡ್ಡಿ, ಮುನಿರಾಜು, ರಮೇಶ್ರೆಡ್ಡಿ, ವೆಂಕಟರೆಡ್ಡಿ, ಅಂಬಿಕಾ, ಗಾಯಿತ್ರಿ, ಮುನಿಯಪ್ಪ, ಹೇಮಾವತಿ, ಸುನಂದಮ್ಮ, ಮುನಿಯಪ್ಪ, ವೆಂಕಟಲಕ್ಷ್ಮಮ್ಮ, ಪಿಡಿಓ ಶ್ರೀನಿವಾಸ್, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಮುನಿಯಪ್ಪ, ವೈ.ಹುಣಸೇನಹಳ್ಳಿ ಕ್ಲಸ್ಟರ್ ಸಿ.ಆರ್.ಪಿ.ಮಂಜುನಾಥ್, ಸದಸ್ಯ ವೆಂಕಟೇಶ್ಮೂರ್ತಿ, ಮುನಿನಾರಾಯಣಮ್ಮ, ಕಮಲಮ್ಮ, ಮುಖ್ಯ ಶಿಕ್ಷಕ ಎಲ್.ವಿ.ವೆಂಕಟರೆಡ್ಡಿ, ಮುಖ್ಯಶಿಕ್ಷಕಿ ವಿಜಯಕುಮಾರಿ, ಉಪನ್ಯಾಸಕ ಕೃಷ್ಣಪ್ಪ, ಶಿಕ್ಷಣ ಸಂಯೋಜಕ ಭಾಸ್ಕರ್ ಗೌಡ, ಶಿಕ್ಷಕ ಶ್ರೀನಿವಾಸ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi