Home News ಸರ್ಕಾರಿ ಶಾಲೆಯ ಮಕ್ಕಳಿಗೆ ಕೆರೆಯಂಚಿನಲ್ಲಿ ಪರಿಸರ ಪಾಠ

ಸರ್ಕಾರಿ ಶಾಲೆಯ ಮಕ್ಕಳಿಗೆ ಕೆರೆಯಂಚಿನಲ್ಲಿ ಪರಿಸರ ಪಾಠ

0
government school lake teaching teacher

ಕೊರೊನಾದಿಂದ ಬಂಧಿಯಾಗಿದ್ದ ಮಕ್ಕಳು ಈಗ ಶಾಲೆಗೆ ಹೋಗುತ್ತಿದ್ದಾರೆ. ತಾಲ್ಲೂಕಿನ ಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮಕ್ಕಳನ್ನು ಶಾಲೆಯಿಂದ ಹೊರಗೆ ಸ್ವಚ್ಛಂದ ಪರಿಸರದೆಡೆಗೆ ಕರೆದೊಯ್ದು ಪರಿಸರ ಪಾಠವನ್ನು ಶುಕ್ರವಾರ ನಡೆಸಿದ್ದಾರೆ.

ಗೌಡನ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಮಾರ್ಗದರ್ಶನದಲ್ಲಿ ಶಾಲೆಯ ಸಮೀಪದಲ್ಲಿರುವ ಕೆರೆಯ ಬಳಿ ಹೋಗಿದ್ದರು. ಕೆರೆಗೆ ಭೇಟಿ ನೀಡುವ ಹಕ್ಕಿಗಳು, ಬಟ್ಟೆ ಒಗೆಯಲು ಬರುವ ಸ್ಥಳೀಯರು, ವಿವಿಧ ಜಲಚರಗಳು ಮುಂತಾದವುಗಳನ್ನು ತೋರಿಸಿ ವಿವರಿಸಿದ ಶಿಕ್ಷಕರು ಮಕ್ಕಳಿಗೆ ಕೆರೆಯ ಅಗತ್ಯತೆಯ ಬಗ್ಗೆ ಮನಮುಟ್ಟುವಂತೆ ತಿಳಿಸಿದರು.

ಶಿಕ್ಷಕರಾದ ಪಿ.ಸುದರ್ಶನ್, ವಿ.ಎಂ.ಮಂಜುನಾಥ್, ಎಚ್.ಬಿ.ರೂಪ, ಎಸ್.ಎ.ನಳಿನಾಕ್ಷಿ ಅವರು ಮಕ್ಕಳಿಗೆ ಹಳ್ಳ, ಕುಂಟೆ, ಕೆರೆ, ಸರೋವರ, ಸಾಗರಗಳು, ಮಳೆಮಾರುತಗಳು, ಜಲ, ಚಕ್ರ, ವಾಯು ಮಾಲಿನ್ಯ, ಜಲಮಾಲಿನ್ಯ, ಶಬ್ದ ಮಾಲಿನ್ಯದ ಬಗ್ಗೆ  ಹಾಗೂ ಕೆರೆಗಳು ಹಳ್ಳಿಗಳ ಜೀವ ನಾಡಿಗಳು, ಕೆರೆಗಳಲ್ಲಿ ನೀರಿದ್ದರೆ ಅಂತರ್ಜಲ ಹೆಚ್ಚಳ, ಕರೆಗಳಿಂದ ಕೃಷಿಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version