Home News ಮತಗಟ್ಟೆಯ ಸುತ್ತ ಆರಿಶಿನ, ಕುಂಕುಮ ಹಚ್ಚಿರುವ ನಿಂಬೆಹಣ್ಣುಗಳು

ಮತಗಟ್ಟೆಯ ಸುತ್ತ ಆರಿಶಿನ, ಕುಂಕುಮ ಹಚ್ಚಿರುವ ನಿಂಬೆಹಣ್ಣುಗಳು

0
Grama Panchayat Elections Bashettihalli

ಗ್ರಾಮ ಪಂಚಾಯಿತಿ ಚುನಾವಣೆಯ ಕಾವು ದಿನೇ ದಿನೇ ಏರುತ್ತಿರುವುದು ಒಂದೆಡೆಯಾದರೆ ಮತ್ತೊಂದೆಡೆ ಈ ಬಾರಿಯ ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲೇಬೇಕು ಎಂಬ ಧಾವಂತದಲ್ಲಿ ಅಭ್ಯರ್ಥಿಗಳು ಹಾಗೂ ಅವರ ಹಿಂಬಾಲಕರು ಮಾಟ, ಮಂತ್ರ, ವಾಮಾಚಾರದ ಮೊರೆಹೋಗಿರುವುದು ಮತದಾರರಲ್ಲಿ ಆತಂಕ ಮೂಡಿಸಿದೆ.

ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬಾಲಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಮತಗಟ್ಟೆಯ ಸುತ್ತ ಆರಿಶಿನ, ಕುಂಕುಮ ಹಚ್ಚಿರುವ ನಿಂಬೆಹಣ್ಣುಗಳನ್ನು ಹೂತಿಟ್ಟು ಪೂಜೆ ಸಲ್ಲಿಸಿರುವುದು ಭಾನುವಾರ ಬೆಳಕಿಗೆ ಬಂದಿದೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣೆಯ ಕಣದಲ್ಲಿರುವ ದಾಸಮ್ಮನ ಪತಿ ವೆಂಕಟಪ್ಪ ಹಾಗೂ ಮಗ ರಾಮಾಂಜಿ ಈ ಕೃತ್ಯವೆಸಗಿದ್ದಾರೆ ಎಂದು ಗ್ರಾಮಸ್ಥರು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಸ್ಥಳಕ್ಕೆ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಂಬಾಲಹಳ್ಳಿ ಸೇರಿದಂತೆ ಅಕ್ಕಪಕ್ಕದ ಮೂರು ಗ್ರಾಮಗಳ ಒಟ್ಟು 450 ಮಂದಿ ಮತದಾರರು ಈ ಮತಗಟ್ಟೆಯಲ್ಲಿ ಮತದಾನ ಮಾಡಲಿದ್ದು ಮತಗಟ್ಟೆಯ ಸುತ್ತ ನಿಂಬೆಹಣ್ಣುಗಳನ್ನು ಇಟ್ಟು ಪೂಜೆ ಮಾಡಿರುವ ಘಟನೆಯಿಂದ ಮತಗಟ್ಟೆಗೆ ಹೋಗಿ ಮತ ಚಲಾಯಿಸಲು ಹಿಂದೇಟು ಹಾಕುವ ಆತಂಕದಲ್ಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version