21.1 C
Sidlaghatta
Saturday, July 27, 2024

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕರಿಸುವ ಕೇಂದ್ರಕ್ಕೆ ಚಾಲನೆ

- Advertisement -
- Advertisement -

Sidlaghatta : ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆ ಅತ್ಯಂತ ಉಪಯುಕ್ತವಾಗಿದೆ. ಹೆಣ್ಣುಮಕ್ಕಳಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಆತ್ಮಸ್ಥೈರ್ಯವನ್ನು ವೃದ್ಧಿಸುವ ಉತ್ತಮ ಕಾರ್ಯವಾಗಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ನಗರದ ಕೋಟೆ ವೃತ್ತದ ಬಳಿಯಿರುವ ಸಮುದಾಯ ಭವನದಲ್ಲಿ ಗುರುವಾರ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕರಿಸುವ ಅರ್ಜಿ ಸ್ವೀಕಾರ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶೇಷವಾಗಿ ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ಸ್ತ್ರೀಶಕ್ತಿಕರಣಗೊಳಿಸುವಂತಹ ಅರ್ಥಪೂರ್ಣವಾದ ಈ ಯೋಜನೆಯಲ್ಲಿ ಕ್ಷೇತ್ರದ ಎಲ್ಲಾ ಅಕ್ಕತಂಗಿಯರು ಹಾಗೂ ತಾಯಂದಿರು ನೋಂದಣಿ ಮಾಡಿಸಿಕೊಳ್ಳಬೇಕೆಂದು ಹೇಳಿದರು.

ಗೃಹ ಲಕ್ಷ್ಮಿ ಯೋಜನೆಯಿಂದ ಬಹಳಷ್ಟು ಕುಟುಂಬಗಳಿಗೆ ಆರ್ಥಿಕವಾಗಿ ಅನುಕೂಲ ಆಗಲಿದ್ದು ಈ ಯೋಜನೆಯನ್ನು ಅಗತ್ಯ ಇರುವ ಎಲ್ಲರೂ ಸದುಪಯೋಗಪಡಿಸಿಕೊಳ್ಳಿ. ಈ ಯೋಜನೆಯನ್ನು ಜಾರಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಶಿಡ್ಲಘಟ್ಟ ಕ್ಷೇತ್ರದ ಎಲ್ಲ ಮತದಾರರು, ಸಾರ್ವಜನಿಕರ ಪರವಾಗಿ ಅಭಿನಂದನೆಗಳನ್ನು ತಿಳಿಸಿದರು.

ಶಿಡ್ಲಘಟ್ಟ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕರಿಸುವ ಕೇಂದ್ರಗಳನ್ನು ತೆರೆದಿದ್ದು ಅಲ್ಲಿ ತರಬೇತಿ ಪಡೆದ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಎಂದು ಮನವಿ ಮಾಡಿದರು.

ಸರ್ಕಾರದ ಯಾವುದೆ ಯೋಜನೆಯಾಗಲಿ ಅದನ್ನು ಅರ್ಹರಿಗೆ ಸಿಗುವಂತೆ ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ನಾನು ಮಾಡಲಿದ್ದು ಎಲ್ಲ ಅಧಿಕಾರಿ, ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಕೋರಿದರು.

ನಗರದಲ್ಲಿ 5 ಕೇಂದ್ರಗಳು ಸೇರಿದಂತೆ ತಾಲ್ಲೂಕಿನಲ್ಲಿ ಒಟ್ಟು 63 ಕೇಂದ್ರಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಗ್ರಾಮ ಓನ್, ಕರ್ನಾಟಕ ಒನ್, ಬಾಪೂಜಿ ಕೇಂದ್ರದಲ್ಲೂ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿಗಳನ್ನ ಸ್ವೀಕರಿಸಲಾಗುವುದು. ಇಲ್ಲಿ ಯಾರೂ ಸಹ ಅರ್ಜಿ ಸಲ್ಲಿಕೆಗೆ ಹಣ ನೀಡುವಂತಿಲ್ಲ. ಅಗತ್ಯ ದಾಖಲೆಗಳನ್ನು ಸಲ್ಲಿಸಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ, ಆರ್ಥಿಕವಾಗಿ ಸಬಲರಾಗಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಮಾತನಾಡಿ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿಗಳನ್ನು ಸ್ವೀಕರಿಸುವ ಕೇಂದ್ರಗಳನ್ನು ಶಿಡ್ಲಘಟ್ಟ ನಗರದಲ್ಲಿ ಎಲ್ಲೆಲ್ಲಿ ಆರಂಭಿಸಲಾಗಿದೆ, ಅಲ್ಲಿ ಕಾರ್ಯನಿರ್ವಹಿಸುವ ರೀತಿ ನೀತಿಗಳ ಬಗ್ಗೆ ವಿವರಿಸಿದರು.

ಶಿಡ್ಲಘಟ್ಟ ನಗರದ ಕೋಟೆಯ ಸಮುದಾಯ ಭವನ, ಹೂವಿನ ವೃತ್ತದಲ್ಲಿನ ನಗರಸಭೆ ಮಳಿಗೆ, ಮಹಬೂಬ್ ನಗರದ ಮಸೀದಿ ಕಾಂಪ್ಲೆಕ್ಸ್, ರೆಹಮತ್ ನಗರದ ಉರ್ದು ಶಾಲೆ, ಸಂತೋಷನಗರದ ಸರಕಾರಿ ಉರ್ದು ಶಾಲೆಯಲ್ಲಿ ಅರ್ಜಿ ಸ್ವೀಕಾರ ಕೇಂದ್ರವನ್ನು ತೆರೆಯಲಾಗಿದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರರಮೇಶ್, ತಹಶೀಲ್ದಾರ್ ಬಿ.ಎನ್.ಸ್ವಾಮಿ, ಸಿಡಿಪಿಒ ನವತಾಜ್, ಮುಖಂಡರಾದ ರಮೇಶ್, ಚಿಕ್ಕಮುನಿಯಪ್ಪ, ರಾಘವೇಂದ್ರ, ಲಕ್ಷ್ಮೀನಾರಾಯಣ್, ಬಿ.ನಾರಾಯಣಸ್ವಾಮಿ, ನಂದು ಹಾಜರಿದ್ದರು.

For Daily Updates WhatsApp ‘HI’ to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!