ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದ ಗುಮ್ಮನಹಳ್ಳಿ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಶನಿವಾರ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,
ಬೆಳಗಿನಿಂದಲೂ ದೇವಾಲಯಕ್ಕೆ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು,ತೀರ್ಥಪ್ರಸಾದ ಸ್ವೀಕರಿಸಿದರು. ಬೆಳಗ್ಗೆಯಿಂದಲೂ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು.
ಪೂಜಾ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ವೆಂಕೋಬರಾವ್ ಭಾಗವಹಿಸಿ ಮಾತನಾಡಿ, “ದೇವಾಲಯದಲ್ಲಿ ಬೆಳಿಗ್ಗೆಯಿಂದ ಅಭಿಷೇಕ, ಬೆಣ್ಣೆ ಅಲಂಕಾರ ,ಹೂವಿನ ಅಲಂಕಾರ ಮಾಡಿದ್ದು, ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ” ಎಂದು ತಿಳಿಸಿದರು.
ದೇವಾಲಯದಲ್ಲಿ ಗ್ರಾಮಸ್ಥರಿಂದ ಭಜನೆ ಕಾರ್ಯಕ್ರಮ ಅನ್ನಸಂತರ್ಪಣೆ ಹಾಗೂ ಈ ವರ್ಷ ವಿಶೇಷವಾಗಿ ಗ್ರಾಮದಲ್ಲಿ ಆಂಜನೇಯಸ್ವಾಮಿ ಪಲ್ಲಕ್ಕಿಯನ್ನು ಏರ್ಪಡಿಸಲಾಗಿತ್ತು.