Home News ಎ.ಎಂ.ತ್ಯಾಗರಾಜ್ ಅವರಿಗೆ “ಗುರುಕುಲ ಚಾಣಕ್ಯ ಪ್ರಶಸ್ತಿ”

ಎ.ಎಂ.ತ್ಯಾಗರಾಜ್ ಅವರಿಗೆ “ಗುರುಕುಲ ಚಾಣಕ್ಯ ಪ್ರಶಸ್ತಿ”

0
A M Tyagaraj Sidlaghatta Gurukula Chanakya Award

ಶಿಡ್ಲಘಟ್ಟ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎ.ಎಂ.ತ್ಯಾಗರಾಜ್ ಅವರಿಗೆ ಈ ಸಾಲಿನ “ಗುರುಕುಲ ಚಾಣಕ್ಯ ಪ್ರಶಸ್ತಿ” ಲಭಿಸಿದೆ.

 ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗೆ ಎ.ಎಂ.ತ್ಯಾಗರಾಜ್ ಭಾಜನರಾಗಿದ್ದು, ಅವರೊಂದಿಗೆ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 19 ಮಂದಿ ಸಾಧಕರನ್ನು ಗೌರವಿಸಲಾಗುತ್ತಿದೆ ಎಂದು ಪ್ರತಿಷ್ಠಾನದ ಹುಲಿಯೂರು ದುರ್ಗ ಲಕ್ಷ್ಮಿನಾರಾಯಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಕಾಳಜಿ ಇಟ್ಟು, ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವವರು ಹಾಗೂ ನಾಡಿನಲ್ಲಿ ಎಲೆ ಮರೆಯ ಕಾಯಿಯಂತೆ ಇರುವ ಸಾಧಕರಿಗೆ ಗುರುಕುಲ ಕಲಾ ಪ್ರತಿಷ್ಠಾನದಿಂದ ವಿವಿಧ ಪ್ರಶಸ್ತಿ ಪ್ರಧಾನ ಮಾಡುತ್ತಿದ್ದೇವೆ. ಜಿಲ್ಲೆ, ರಾಜ್ಯದ ಗಡಿಯನ್ನು ಮೀರಿ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನಡೆಸುತ್ತಾ, ಭಾಷಾಭಿಮಾನವನ್ನು ಅರಳಿಸುತ್ತಿರುವ ಎ.ಎಂ.ತ್ಯಾಗರಾಜ್ ಅವರ ಸೇವೆಯನ್ನು ಗೌರವಿಸುವ ಸಲುವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಆಯ್ಕೆ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

 ತುಮಕೂರಿನಲ್ಲಿ ಗುರುಕುಲ ಕಲಾ ಪ್ರತಿಷ್ಠಾನದ ರಾಜ್ಯ ಘಟಕ ನಡೆಸುವ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡುವುದಾಗಿ ಅವರು ತಿಳಿಸಿದ್ದಾರೆ.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version