Sidlaghatta : 2026-27ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಾದ ಹೊಸ ಪ್ರದೇಶ ವಿಸ್ತರಣೆ,(ದ್ರಾಕ್ಷಿ, ಬಾಳೆ, ಪಪ್ಪಾಯ, ಮಾವು, ದಾಳಿಂಬೆ, ಸೀಬೆ, ಬೆಣ್ಣೆ ಹಣ್ಣು, ಹಲಸಿನ ಹಣ್ಣು ಮತ್ತು ಗೋಡಂಬಿ), ಹೈಬ್ರಿಡ್ ತರಕಾರಿ, ಮಾವು ಪುನಶ್ಚೇತನ, ಪ್ಲಾಸ್ಟಿಕ್ ಹೊದಿಕೆ, ವಯುಕ್ತಿಕ ಕೃಷಿ ಹೊಂಡ, ಪ್ಯಾಕ್ ಹೌಸ್, ಈರುಳ್ಳಿ ಶೇಖರಣಾ ಘಟಕ, ಪಾಲಿಹೌಸ್, ಪಾರಂ ಗೇಟ್, ಪಕ್ಷಿ ನಿರೋಧ ಬಲೆ, ಸೋಲಾರ್ ಪಂಪ್ಸೆಟ್, ಕಡಿಮೆ ವೆಚ್ಚದ ಹಣ್ಣು ಮಾಗಿಸುವ ಘಟಕ, ಪ್ಲಾಸ್ಟಿಕ್ ಕ್ರೇಟ್ ಮತ್ತು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳಲು ಶೇ 90ರಷ್ಟು ಸಹಾಯ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅರ್ಜಿಸಲ್ಲಿಸಬಹುದಿದ್ದು ಅರ್ಜಿ ಸಲ್ಲಿಸಲು ಜೂನ್ 30 ಕಡೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು(ಕಸಬಾ ಮತ್ತು ಬಶೆಟ್ಟಹಳ್ಳಿ ಹೋಬಳಿ-9591917957, ಜಂಗಮಕೋಟೆ ಹೋಬಳಿ-8105076125, ಸಾದಲಿ ಹೋಬಳಿ-9113614924 ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು-9449679432 ರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.








