Home News ದಾಸಶ್ರೇಷ್ಠ ಶ್ರೀಕನಕದಾಸರ ಹಾಗೂ ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

ದಾಸಶ್ರೇಷ್ಠ ಶ್ರೀಕನಕದಾಸರ ಹಾಗೂ ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

0
Kanakadasa Onake Obavva Jayanti

Sidlaghatta : ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಲಾದ ದಾಸಶ್ರೇಷ್ಠ ಶ್ರೀ ಕನಕದಾಸರ (Kanakadasa) ಹಾಗೂ ವೀರರಾಣಿ ಒನಕೆ ಓಬವ್ವ (Onake Obavva Jayanti) ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರು ಮಾತನಾಡಿದರು.

ದಾಸಶ್ರೇಷ್ಠ ಶ್ರೀಕನಕದಾಸರ ಹಾಗೂ ವೀರರಾಣಿ ಒನಕೆ ಓಬವ್ವ ಇಬ್ಬರು ಮಹಾನ್ ಆದರ್ಶ ವ್ಯಕ್ತಿಗಳನ್ನು ನೆನೆಯುವ ಮತ್ತು ಅವರ ಜೀವನವನ್ನು ಅರಿಯುವ ಮೂಲಕ ಅವರ ಬದುಕಿನ ಸಂದೇಶವನ್ನು ಅಳವಡಿಸಿಕೊಳ್ಳೋಣ ಎಂದು ತಿಳಿಸಿದರು.

ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು. ಕನಕದಾಸರು ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನಕದಾಸರು ಬರಿ ಕುರುಬ ಜಾತಿಗೆ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು. 15 -16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು. ಕನಕ ಭವನಕ್ಕೆ ಮತ್ತು ಛಲವಾದಿ ಸಂಘಕ್ಕೆ ಸ್ಥಳ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕುರುಬ ಸಮುದಾಯದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಘೂ ಛಲವಾದಿ ಸಂಘದಿಂದ ಹಿರಿಯರಿಗೆ ಸನ್ಮಾನ ನಡೆಯಿತು. ಕನಕದಾಸರ ಹಾಗೂ ಓಬವ್ವ ಅವರ ಜೀವನ ಕುರಿತು ಉಪನ್ಯಾಸ ನಡೆಯಿತು.

ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ಕುರುಬರ ಸಂಘದ ಅಧ್ಯಕ್ಷ ಕೆ.ಮಂಜುನಾಥ್, ಕಾರ್ಯದರ್ಶಿ ಎಂ.ರಾಮಾಂಜಿ, ಗೌರವಾಧ್ಯಕ್ಷ ಎಂ.ಗಣೇಶಪ್ಪ, ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ತಾದೂರು ಮಂಜುನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಛಲವಾದಿ ಸಂಘದ ತ್ಯಾಗರಾಜ್, ಗ್ಯಾಸ್ ನಾಗರಾಜ್, ಶೆಟ್ಟಹಳ್ಳಿ ಮೂರ್ತಿ, ನಾಗಣ್ಣ, ಮುನಿಕೃಷ್ಣಪ್ಪ, ಶ್ರೀನಿವಾಸ್, ಬೋದಗೂರು ಬಾಬು, ಮೇಲೂರು ಗುಂಡಪ್ಪ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version