Sidlaghatta : ತಾಲ್ಲೂಕಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯನ್ನು ಜೂನ್ 27 ರ ಶನಿವಾರ ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಒಕ್ಕಲಿಗ ಸಮುದಾಯದ ಮುಖಂಡರು ಒಕ್ಕೊರಲಿನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ತಾಲ್ಲೂಕಿನ ಹಂಡಿಗನಾಳ ಶ್ರೀ ಕೆಂಪಣ್ಣ ಶ್ರೀ ವೀರಣ್ಣ ಕಲ್ಯಾಣಮಂಟಪದಲ್ಲಿ ಕೆಂಪೇಗೌಡ ಆಚರಣಾ ಸಮಿತಿಯಿ೦ದ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪಕ್ಷಾತೀತವಾಗಿ ಒಕ್ಕಲಿಗ ಜನಾಂಗದ ಮುಖಂಡರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಮುದಾಯದ ಮುಖಂಡರು ತಮ್ಮ ತಮ್ಮ ಅಮೂಲ್ಯವಾದ ಅಭಿಪ್ರಾಯ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ, ಆರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲು ತಾವು ಸಂಪೂರ್ಣ ಬೆ೦ಬಲ ನೀಡುವುದಾಗಿ ತಿಳಿಸಿದರು.
ಸಮುದಾಯದ ಬಡ ಮಕ್ಕಳನ್ನು ಗುರ್ತಿಸಿ ಶಿಕ್ಷಣಕ್ಕೆ ಸಂಘದಿಂದ ಸಹಾಯಧನ ನೀಡಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ ಮಾಡಬೇಕು ಎಂದು ಕೆಲವರು ಸಲಹೆ ನೀಡಿದರು.
ಕಾರ್ಯಕ್ರಮಗಳಲ್ಲಿ DJ ಗಳನ್ನು ಬಳಸಬಾರದು ಎಂದು ಕೋರ್ಟ್ ಆದೇಶ ಹೊರಡಿಸಿರುವುದರಿಂದ ಯಾರೂ ಸಹ ಡಿಜೆಗಳನ್ನು ಆಳವಡಿಸಬಾರದು ಎಂದು ತೀರ್ಮಾನಿಸಿದೆ ಒಂದು ವೇಳೆ ಅಳವಡಿಸಿಕೊಂಡು ಬಂದಿದ್ದೆ ಅದರೆ ಅದಕ್ಕೆ ಅವರೆ ಹೊಣೆ ಯಾವುದೇ ಕಾರಣಕ್ಕೂ ಆಚರಣಾ ಸಮಿತಿ ಜವಾಬ್ದಾರಿ ಅಲ್ಲ. ಕಾರ್ಯಕ್ರಮದ ರೂಪರೇಷಗಳನ್ನು ತಯಾರಿಸುವ ಜವಬ್ದಾರಿಯನ್ನು ಆಚರಣಾ ಸಮಿತಿಗೆ ವಹಿಸಲು ತೀರ್ಮಾನಿಸಲಾಯಿತು.
ನಾಡಪ್ರಭು ಕೆಂಪೇಗೌಡರ ಪಲ್ಲಕ್ಕಿ ಉತ್ಸವದಲ್ಲಿ ನೂರಾರು ಪಲ್ಲಕ್ಕಿಗಳು ಭಾಗವಹಿಸಿ ಮೆರವಣಿಗೆಯನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಯಿತು.
ಜಯಂತೋತ್ಸವದ ಎಲ್ಲಾ ಕಾರ್ಯಕ್ರಮಗಳಿಗೂ, ಆರ್ಥಿಕ ಕ್ರೂಡಿಕರಣ ಹಾಗೂ ಕಾರ್ಯಕ್ರಮಗಳ ಆಯೋಜನೆ ಬಗ್ಗೆ ಹಾಗೂ ಭಾಗವಹಿಸುವರಿಗೆ ಊಟದ ವ್ಯವಸ್ಥೆಯನ್ನು ಏರ್ಪಡಿಸುವ ಬಗ್ಗೆ ಅನಿಸಿಕೆಗಳನ್ನು ತಿಳಿಸಿದರು.
ತಾಲ್ಲೂಕಿನ ಒಕ್ಕಲಿಗರ ಕ್ಷೇಮಾಭಿವೃದ್ದಿಗಾಗಿ ಹಾಗೂ ಒಕ್ಕಲಿಗರ ಮೇಲೆ ನಡೆಯುವ ದೌರ್ಜನ್ಯಗಳನ್ನು ಮೆಟ್ಟಿ ನಿಲ್ಲಲು ಒಕ್ಕಲಿಗರ ಸಮುದಾಯ ಪ್ರತಿ ಮೂರು ತಿಂಗಳಿಗೆ ಸಭೆ ಸೇರಿ ಸಾಧಕ ಭಾಧಕಗಳನ್ನು ಚರ್ಚೆ ಮಾಡಬೇಕು ಎಂದು ಸಲಹೆ ನೀಡಿದರು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಮಾಡಿಕೊಡದೆ ಒಗ್ಗಟ್ಟಿನಿಂದ ಶಾಂತಿಯಿಂದ ಸಹೋದರತೆಯಿಂದ ಪಕ್ಷಾತೀತವಾಗಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಸಲ್ಲಾಪುರಮ್ಮ ದೇವಾಲಯದಿಂದ ಬೆಳಿಗ್ಗೆ 11ಗಂಟೆಗೆ ಸರಿಯಾಗಿ ಕೆಂಪೇಗೌಡ ಪಲ್ಲಕ್ಕಿ ಮೆರವಣಿಗೆ ಮುಖಾಂತರ ಗ್ರಾಮಗಳಿಂದ ಆಗಮಿಸಿರುವ ಪಲ್ಲಕ್ಕಿಗಳ ಹಾಗೂ ಕಲಾತಂಡಗಳೊಂದಿಗೆರ ಮೆರವಣಿಗೆಗೆ ಕ್ಷೇತ್ರದ ಶಾಸಕರು ಮತ್ತು ಸಮುದಾಯದ ಮುಖಂಡರು ಚಾಲನೆ ನೀಡುವ ಮೂಲಕ ಮೆರವಣಿಗೆ ಪ್ರಾರಂಭವಾಗುತ್ತದೆ. ಟಿಬಿ ರಸ್ತೆ, ಕೋಟೆ ವೃತ್ತ , ರೈಲ್ವೆ ನಿಲ್ದಾಣ, ಉಲ್ಲೂರುಪೇಟೆ ಅಶ್ವಥ ಕಟ್ಟೆ, ತಾಲ್ಲೂಕು ಒಕ್ಕಲಿಗರ ಯುವ ಸೇನೆ ಸಂಘ ಕಚೇರಿ ಬಳಿ ಪಲ್ಲಕ್ಕಿ ಗಳಿಗೆ ನೆನಪಿನಕಾಣಿಕೆ ವಿತರಣೆ, ಮಯೂರ ವೃತ್ತದ ಬಳಿ ಒಕ್ಕಲಿಗ ಭವನದ ಬಳಿ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿದ್ದು ತದನಂತರ ತಮ್ಮ ಗ್ರಾಮಗಳಿಗೆ ಹಿಂದಿರುಗಲಾಗುವುದು ಎಂದು ವಿವರ ನೀಡಿದರು.
ಶಿಡ್ಲಘಟ್ಟ ತಾಲ್ಲೂಕಿನ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಸ್ಥಳೀಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ 100 ವಿದ್ಯಾರ್ಥಿಗಳನ್ನು ಗುರುತಿಸಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆಯುವ ಕೆಂಪೇಗೌಡ ಜಯಂತಿ ಸರ್ಕಾರದ ಕಾರ್ಯಕ್ರಮದಲ್ಲಿ ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ವತಿಯಿಂದ ಪುರಸ್ಕರಿಸಲಾಗುವುದು ಎಂದು ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ಸದಸ್ಯರು ತಿಳಿಸಿದರು.
ಶಿಡ್ಲಘಟ್ಟ ಟೌನ್ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ತಾಲ್ಲೂಕು ಒಕ್ಕಲಿಗರ ಯುವಸೇನೆ ಸಂಘದ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಪುರುಷೋತ್ತಮ್, ದೇವರಾಜ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸೀಕಲ್ ಆನಂದಗೌಡ, ಪೂಲಕುಂಟ್ಲಹಳ್ಳಿ ಪಿ.ಎನ್.ರಘುನಾಥರೆಡ್ಡಿ, ಹಿರೆಬಲ್ಲ ಕೃಷ್ಣಪ್ಪ, ದಿಬ್ಬೂರಹಳ್ಳಿ ಪ್ರಸನ್ನ, ರಾಯಪನಹಳ್ಳಿ ಅಶ್ವಥನಾರಾಯಣರೆಡ್ಡಿ, ದಿಬ್ಬೂರಹಳ್ಳಿ ರಾಮಚಂದ್ರ ಎನ್.ಪಿ.ಎಸ್.ಅಧ್ಯಕ್ಷ ಗಜೇಂದ್ರ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಸಿ.ಎಂ.ಮುನಿರಾಜು, ಗೊರಮೊಡಗು ರಾಜಣ್ಣ. ಎಚ್.ಕೆ.ಸುರೇಶ್, ಅನೂರು ವಿಜಯೇಂದ್ರ, ಎಂ.ಎಸ್.ಸೊಣ್ಣಪ್ಪರೆಡ್ಡಿ, ಲಕ್ಷಿನಾರಾಯಣ ಹಾಜರಿದ್ದರು.








