102 ಫಲಾನುಭವಿಗಳಿಗೆ ₹1.98 ಕೋಟಿ ಮೌಲ್ಯದ ಕೆಎಂಡಿಸಿ ಮಂಜೂರಾತಿ ಪತ್ರ ವಿತರಣೆ

- Advertisement -
- Advertisement -

Sidlaghatta : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ) ವತಿಯಿಂದ 2025–26ನೇ ಸಾಲಿನ ವಿವಿಧ ಸ್ವಯಂ ಉದ್ಯೋಗ ಯೋಜನೆಗಳಿಗೆ ಆಯ್ಕೆಯಾದ 102 ಫಲಾನುಭವಿಗಳಿಗೆ ₹1.98 ಕೋಟಿ ಮೌಲ್ಯದ ಮಂಜೂರಾತಿ ಪತ್ರಗಳನ್ನು ಮಂಗಳವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿತರಿಸಲಾಯಿತು.

ಮಂಜೂರಾತಿ ಪತ್ರಗಳನ್ನು ವಿತರಿಸಿ ಮಾತನಾಡಿದ ಶಾಸಕ ಬಿ.ಎನ್. ರವಿಕುಮಾರ್, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಬೇಕು ಎಂಬ ಉದ್ದೇಶದಿಂದ ಕ್ಷೇತ್ರದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು, ಅದರ ಫಲವಾಗಿ ಹೆಚ್ಚಿನ ಅನುದಾನ ದೊರೆತಿದೆ ಎಂದು ಹೇಳಿದರು.

ರೇಷ್ಮೆ ನೂಲು ಬಿಚ್ಚಾಣಿಕೆ (ಸಿಲ್ಕ್ ರೀಲಿಂಗ್) ಉದ್ಯಮದಲ್ಲಿ ತೊಡಗಿರುವ ಮುಸ್ಲಿಂ ಸಮುದಾಯದವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ, ರೇಷ್ಮೆ ನೂಲು ಬಿಚ್ಚಾಣಿಕೆ ಯೋಜನೆಯಡಿ 96 ಫಲಾನುಭವಿಗಳಿಗೆ ₹1.92 ಕೋಟಿ ಮಂಜೂರಾಗಿದೆ ಎಂದು ತಿಳಿಸಿದರು.

ಟ್ಯಾಕ್ಸಿ ಹಾಗೂ ಸರಕು ವಾಹನ ಖರೀದಿ ಯೋಜನೆಯಡಿ ಒಬ್ಬ ಫಲಾನುಭವಿಗೆ ₹3 ಲಕ್ಷ, ವೃತ್ತಿ ಪ್ರೋತ್ಸಾಹ ಯೋಜನೆಯಡಿ ಇಬ್ಬರಿಗೆ ₹2 ಲಕ್ಷ ಹಾಗೂ ಶ್ರಮಶಕ್ತಿ ಯೋಜನೆಯಡಿ ಮೂವರಿಗೆ ₹1.50 ಲಕ್ಷ ಮಂಜೂರಾಗಿದ್ದು, ಒಟ್ಟು 102 ಫಲಾನುಭವಿಗಳಿಗೆ ₹1.98 ಕೋಟಿ 50 ಸಾವಿರ ಮೌಲ್ಯದ ಮಂಜೂರಾತಿ ಪತ್ರಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಸರ್ಕಾರದ ಯೋಜನೆಗಳ ಸೌಲಭ್ಯಗಳು ನೈಜ ಫಲಾನುಭವಿಗಳಿಗೆ ತಲುಪುವಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಶಿಕ್ಷಣ, ಆರೋಗ್ಯ, ಸ್ವಯಂ ಉದ್ಯೋಗ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಕ್ಷೇತ್ರದ ಜನರಿಗೆ ತಲುಪಿಸಲು ಆದ್ಯತೆ ನೀಡಲಾಗುವುದು ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ ಇನ್ನೂ ಸೌಲಭ್ಯ ಪಡೆಯದ ಅರ್ಹ ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ, ಅಧಿಸೂಚನೆ ಹೊರಡಿಸಿ ಬೋರ್‌ವೆಲ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ, ಕೆಎಂಡಿಸಿ ಡೆತ್ ಕೇಸ್ ಯೋಜನೆಯಡಿ ಸಾಲ ಪಡೆದು ಮೃತಪಟ್ಟ ಫಲಾನುಭವಿಗಳ ಕುಟುಂಬಗಳಿಗೆ ಸಾಲಮನ್ನಾ ಶಿಫಾರಸು ಆದೇಶ ಪತ್ರಗಳನ್ನು ವಿತರಿಸಲಾಯಿತು. ಆರು ಕುಟುಂಬಗಳಿಗೆ ಒಟ್ಟು ₹44.78 ಲಕ್ಷ ಸಾಲಮನ್ನಾ ಮಾಡಲಾಗಿದ್ದು, ಇದರಲ್ಲಿ ₹29.45 ಲಕ್ಷ ಮೂಲಸಾಲ ಹಾಗೂ ₹15.33 ಲಕ್ಷ ಬಡ್ಡಿ ಸೇರಿದೆ.

ಮುಂದಿನ ವರ್ಷವೂ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಸ್ವೀಕರಿಸಿ, ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಾರದರ್ಶಕವಾಗಿ ತಲುಪಿಸುವ ಕಾರ್ಯ ಮುಂದುವರಿಸಲಾಗುವುದು ಎಂದು ಶಾಸಕ ಹೇಳಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆರ್. ಹೇಮಾವತಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು ಹಾಗೂ ಫಲಾನುಭವಿಗಳು ಹಾಜರಿದ್ದರು.

In English: The Karnataka Minorities Development Corporation (KMDC) distributed sanction letters worth ₹1.98 crore to 102 beneficiaries selected under various self-employment schemes for 2025–26 at the Sidlaghatta taluk panchayat hall on Tuesday. MLA B.N. Ravikumar said 96 beneficiaries in the silk reeling sector received ₹1.92 crore, with further sanctions under taxi/goods vehicle, profession incentive and Shrama Shakti schemes. Loan waiver orders totalling ₹44.78 lakh were also handed to six families of deceased borrowers under the KMDC death-case scheme.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!