Home News KPCC ಅಧ್ಯಕ್ಷರ ಪದಗ್ರಹಣ: ಶಿಡ್ಲಘಟ್ಟದಿಂದ ಬೆಂಗಳೂರಿಗೆ ತೆರಳಿದ ಸಹಸ್ರಾರು Congress ಕಾರ್ಯಕರ್ತರು

KPCC ಅಧ್ಯಕ್ಷರ ಪದಗ್ರಹಣ: ಶಿಡ್ಲಘಟ್ಟದಿಂದ ಬೆಂಗಳೂರಿಗೆ ತೆರಳಿದ ಸಹಸ್ರಾರು Congress ಕಾರ್ಯಕರ್ತರು

0
KPCC President Oath taking ceremony Rajeev Gowda Congress Sidlaghatta

Sidlaghatta : Congress ಪಕ್ಷದ ಹಿರಿಯ ನಾಯಕರೂ ಆದಂತಹ ಬಿ.ಕೆ.ಹರಿಪ್ರಸಾದ್ ಅವರು KPCC ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಆನೆ ಬಲ ಬಂದಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ವಿ.ರಾಜೀವ್‌ ಗೌಡ ಹೇಳಿದರು.

ಇಂದು ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭಕ್ಕೆ ಕ್ಷೇತ್ರದಿಂದ ಹೊರಟ ಸುಮಾರು ನೂರಕ್ಕೂ ಹೆಚ್ಚು ಬಸ್ ಹಾಗೂ ಕಾರುಗಳಿಗೆ ಚಾಲನೆ ನೀಡಿ ಮಾತನಾಡಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗು ಬಿ.ಕೆ.ಹರಿಪ್ರಸಾದ್ ಅವರ ಸಂಘಟನಾ ಚಾತುರ್ಯ ಪಕ್ಷವನ್ನು ಇನ್ನಷ್ಟು ಬಲಪಡಿಸಲಿದೆ. ಶಿಡ್ಲಘಟ್ಟ ಕ್ಷೇತ್ರದಿಂದ ನಮ್ಮ ಕಾರ್ಯಕರ್ತರು ತೋರಿರುವ ಈ ಅಭೂತಪೂರ್ವ ಬೆಂಬಲವೇ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವಿಜಯೋತ್ಸವಕ್ಕೆ ಮುನ್ನುಡಿಯಾಗಲಿದೆ ಎಂದರು.

ತಾಲ್ಲೂಕಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದ ಮುಂಭಾಗದಿಂದ ತೆರಳಿದರು. ಪಕ್ಷದ ಬಾವುಟಗಳು, ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ನಾಯಕರ ಭಾವಚಿತ್ರವಿರುವ ಪ್ಲೆಕ್ಸ್ ಗಳನ್ನು ಹಿಡಿದು ಕಾರ್ಯಕರ್ತರು ಜಯಘೋಷ ಹಾಕುತ್ತಾ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಪಂಚಾಯತಿ ಸದಸ್ಯರು ಹಾಗೂ ನೂರಾರು ಮಹಿಳಾ ಕಾರ್ಯಕರ್ತರು ಇದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

Exit mobile version