
ನಗರದ ಕೋಟೆ ವೃತ್ತದಲ್ಲಿ ನಗರಸಭೆ ವತಿಯಿಂದ ಕೊರೊನ ಎರಡನೆಯ ಅಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಹಾಕದೆ ರಸ್ತೆಗೆ ಬಂದವರಿಗೆ ದಂಡ ವಸೂಲಿ ಮಾಡಲಾಯಿತು.
ಜಿಲ್ಲಾ ಯೋಜನಾ ನಿರ್ದೇಶಕರ ಕಚೇರಿಯ ವ್ಯವಸ್ಥಾಪಕ ಸತ್ಯನಾರಾಯಣ್ ಮಾತನಾಡಿ, ಭಾರತದಲ್ಲಿ ಕೊರೊನ ಎರಡನೇ ಅಲೆ ತೀವ್ರವಾಗಿ ಹರಡುತ್ತಿದ್ದು, ಸರ್ಕಾರದ ಆದೇಶದಂತೆ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಜನರು ಮಾಸ್ಕ್ ಹಾಕದೆ ನಿರ್ಲಕ್ಷ ವಹಿಸುತ್ತಿದ್ದು, ಅಂಥವರಿಗೆ ಸರ್ಕಾರ ಸೂಚಿಸಿರುವಂತೆ 100 ರೂ ದಂಡ ವಿಧಿಸಲಾಗುತ್ತಿದೆ. ಈ ರೀತಿ ಪ್ರತಿನಿತ್ಯ ನಗರದ ವಿವಿಧ ಕಡೆಗಳಲ್ಲಿ ದಂಡ ವಸೂಲಿ ಮಾಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಮಾಸ್ಕ್ ಧರಿಸಿ, ಕೊರೊನಾ ರೋಗವನ್ನು ನಿಯಂತ್ರಣ ಮಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಮಯದಲ್ಲಿ ನಗರಸಭೆಯ ವ್ಯವಸ್ಥಾಪಕ ಶಿವಶಂಕರ್, ಕಿರಿಯ ಅಭಿಯಂತರ ರಾಮಯ್ಯ, ಕಿರಣ್, ಸುಧಾಕರ್, ಭುವನ್ ಹಾಜರಿದ್ದರು.