ಶಿಡ್ಲಘಟ್ಟದ ನ್ಯಾಯಾಲಯದಲ್ಲಿ ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಮೆಗಾ ಲೋಕ್ ಅದಾಲತ್ ನಲ್ಲಿ ಒಟ್ಟು 908 ಪ್ರಕರಣಗಳು ಇತ್ಯರ್ಥಗೊಂಡು ಒಂದು ಕೋಟಿ 32 ಲಕ್ಷ 53 ಸಾವಿರ 471 ರೂಗಳನ್ನು ಪಾವತಿಸಲಾಗಿದೆ.
ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರೂ ಆದ ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕರೆಹನುಮಂತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಅದಾಲತ್ನಲ್ಲಿ ವಿವಿಧ ರೀತಿ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಲಾಯಿತು
ಚೆಕ್ ಪ್ರಕರಣಗಳು 38 ಇತ್ಯರ್ಥಗೊಂಡು, 87 ಲಕ್ಷ 50 ಸಾವಿರ ರೂ, 31 ಸಿವಿಲ್ ವ್ಯಾಜ್ಯಗಳಿಂದ 24,77,149 ರೂ, 722 ಕ್ರಿಮಿನಲ್ ವ್ಯಾಜ್ಯಗಳಿಂದ 1,42,050 ರೂ, 106 ಸರ್ಕಾರಿ ಶಾಲಾ ಮಕ್ಕಳ ಜನನ ಪ್ರಮಾಣ ಪತ್ರಗಳು, 11 ವ್ಯಾಜ್ಯಪೂರ್ವ ಪ್ರಕರಣಗಳಿಂದ (ಬ್ಯಾಂಕ್) 18,84,272 ರೂಗಳು ಸೇರಿದಂತೆ ಒಟ್ಟಾರೆಯಾಗಿ 1,32,53,471 ರೂಗಳು ಪಾವತಿಯಾದವು. 11 ವ್ಯಾಜ್ಯ ಪೂರ್ವ ಪ್ರಕರಣಗಳು ಮತ್ತು 897 ನ್ಯಾಯಾಲಯದ ಪ್ರಕರಣಗಳು ಸೇರಿ ಒಟ್ಟು 908 ಪ್ರಕರಣಗಳು ಇತ್ಯರ್ಥಗೊಂಡವು.
ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರೂ ಆದ ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕರೆಹನುಮಂತಪ್ಪ, ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂಜುಕುಮಾರ್.ಎ.ಪಚ್ಚಾಪುರೆ, ಸಂಧಾನಕಾರರಾಗಿ ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ, ಕಾರ್ಯದರ್ಶಿ ಎಂ.ಬಿ.ಲೋಕೇಶ್ ಹಾಜರಿದ್ದರು.