21.1 C
Sidlaghatta
Saturday, July 27, 2024

ಮೇಲೂರಿನಲ್ಲಿ ನವದೇವತೆಗಳ ಉತ್ಸವ

- Advertisement -
- Advertisement -

ತಾಲ್ಲೂಕಿನ ಮೇಲೂರಿನಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ಕನ್ನಡ ರೈತ ಯುವಕ ಸಂಘದ ವತಿಯಿಂದ ಎರಡು ದಿನಗಳ ಕಾಲ ನವದೇವತೆಗಳ ಉತ್ಸವ ಹಾಗೂ ಶ್ರೀ ಶನೇಶ್ವರಸ್ವಾಮಿ ಬಸಪ್ಪನವರ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.

 ಮೇಲೂರಿನ ಸುಪ್ರಸಿದ್ಧ ಗಂಗಾದೇವಿ ಆದಿಯಾಗಿ ಶ್ರೀ ಉಮಾಮಹೇಶ್ವರ, ಶ್ರೀ ಚನ್ನಕೇಶವ, ಶ್ರೀ ಸುಗ್ಗಲಮ್ಮದೇವಿ, ಶ್ರೀ ಚೌಡೇಶ್ವರಿದೇವಿ, ಶ್ರೀ ಮುನೇಶ್ವರಸ್ವಾಮಿ, ಶ್ರೀ ಸಪ್ಪಲಮ್ಮದೇವಿ, ನಗರದೇವತೆ ಶ್ರೀ ಅಣ್ಣಮ್ಮ, ಗಡ್ಡದನಾಯಕನಹಳ್ಳಿ ಶ್ರೀ ದುರ್ಗಾಮಹೇಶ್ವರಿದೇವಿಯವರ ನವದೇವತೆಗಳ ಉತ್ಸವ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

 ಆನೇಕಲ್ ತಾಲ್ಲೂಕಿನ ಪ್ರಸಿದ್ಧ ಮಂಚನಹಳ್ಳಿ ಬಸಪ್ಪನವರು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗುತ್ತಾ ಭಕ್ತಗಣಕ್ಕೆ ಆಶಿರ್ವಾದ ನೀಡಿದ್ದು ವಿಶೇಷವಾಗಿತ್ತು. ಗ್ರಾಮದ ಮನೆಗಳಲ್ಲಿ ಪೂಜೆಗೆ ಕೊಟ್ಟು, ಪಾದ ಪೂಜೆ ಮಾಡುವ ಮೂಲಕ ಭಕ್ತಿ ಭಾವದಿಂದ ನಮಿಸಿದರು. ಗ್ರಾಮದ  ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಬಸಪ್ಪ ಗ್ರಾಮದ ಕೆಲ ಮನೆಗಳಿಗೆ ಪ್ರವೇಶಿಸಿ ಮನೆಯವರನ್ನು ಆಶೀರ್ವದಿಸಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗ್ರಾಮಗಳು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಭಕ್ತಾದಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವೀರಗಾಸೆ, ಡೋಲು, ಮಂಗಳ ವಾದ್ಯಗಳು, ಕರಡಿ ಸಮ್ಮೇಳ ಮೆರವಣಿಗೆಯಲ್ಲಿ ಮೆರುಗನ್ನು ತಂದವು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!