Home News ನರೇಗಾದಡಿ ರೇಷ್ಮೆ ರೈತರು ಹೆಸರು ನೋಂದಾಯಿಸಿಕೊಳ್ಳಲು ಮನವಿ

ನರೇಗಾದಡಿ ರೇಷ್ಮೆ ರೈತರು ಹೆಸರು ನೋಂದಾಯಿಸಿಕೊಳ್ಳಲು ಮನವಿ

0
MNREGA Sidlaghatta

Sidlaghatta : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೇಷ್ಮೆ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳಿಗೆ ಹೆಸರು ನೋಂದಾಯಿಸಿಕೊಳ್ಳಲು ರೈತರಲ್ಲಿ ರೇಷ್ಮೆ ಸಹಾಯಕ ನಿರ್ದೇಶಕ ಎಂ.ಸಿ.ಚಂದ್ರಪ್ಪ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನ.16ರಿಂದ29 ರವರೆಗೂ ಗ್ರಾಮ ಪಂಚಾಯಿತಿವಾರು ಗ್ರಾಮ ಸಭೆಗಳು ನಡೆಯಲಿದ್ದು ಹಿಪ್ಪುನೇರಳೆ ನರ್ಸರಿ ಆರಂಭಿಸುವವರು, ಹೊಸದಾಗಿ ಜೋಡಿ ಸಾಲು ಪದ್ದತಿಯ ಹಿಪ್ಪುನೇರಳೆ ನಾಟಿ ಮಡುವವರು ಹಾಗೂ ಮರಪದ್ದತಿಯಲ್ಲಿ ಹಿಪ್ಪುನೇರಳೆ ನಾಟಿ ಮಾಡುವ ರೈತರು ತಮ್ಮ ಹೆಸರುಗಳನ್ನು ನೋಂದಾಯಿಸಲು ಕೋರಿದ್ದಾರೆ.

ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಿ ನರೇಗಾ ಯೋಜನೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಿ ಕ್ರಿಯಾ ಯೋಜನೆ ತಯಾರಿಸಿ ಅನುಮೋದಿಸಲಾಗುವುದು.

ಆದ್ದರಿಂದ ಆಸಕ್ತ ಹಾಗೂ ಅರ್ಹ ರೈತರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆ ನಡೆಯುವುದಕ್ಕೂ ಮುನ್ನ ಅಥವಾ ರೇಷ್ಮೆ ಇಲಾಖೆಯ ತಾಂತ್ರಿಕ ಸೇವಾ ಕೇಂದ್ರ ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಇಲ್ಲವಾದಲ್ಲಿ ರೇಷ್ಮೆ ಇಲಾಖೆಯಿಂದ ನರೇಗಾ ಯೋಜನೆಯಡಿ ಸಿಗುವ ಸವಲತ್ತುಗಳು ಸಿಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಎಂ.ಸಿ.ಚಂದ್ರಪ್ಪ, ಸಹಾಯಕ ನಿರ್ದೇಶಕರು, ರೇಷ್ಮೆಇಲಾಖೆ, ಮೊ.ನಂ.94483 50272 ಸಂಪರ್ಕಿಸಲು ಕೋರಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version