Home News ರೈತ ಸಂಘದ ಕಾರ್ಯಾಧ್ಯಕ್ಷರಾಗಿ ಭಕ್ತರಹಳ್ಳಿ ಬೈರೇಗೌಡ ನೇಮಕ

ರೈತ ಸಂಘದ ಕಾರ್ಯಾಧ್ಯಕ್ಷರಾಗಿ ಭಕ್ತರಹಳ್ಳಿ ಬೈರೇಗೌಡ ನೇಮಕ

0
Raita Sangha Bhaktarahalli Byregowda

Sidlaghatta : ಹಸಿರು ಸೇನೆ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ಶಿಡ್ಲಘಟ್ಟ ತಾಲ್ಲೂಕು ಭಕ್ತರಹಳ್ಳಿ ಬೈರೇಗೌಡ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆದೇಶಿಸಿದ್ದಾರೆ.

ಬೈರೇಗೌಡ ಅವರು ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಆ ನಂತರ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಲವು ವರ್ಷಗಳಿಂದಲೂ ಉತ್ತಮ ಸಂಘಟನಾಕಾರರಾಗಿ ಕಾರ್ಯನಿರ್ವಹಿಸಿದ್ದರು.

ಶಾಶ್ವತ ನೀರಾವರಿ ಹೋರಾಟ ಸೇರಿದಂತೆ ರೈತ ಪರ ನಡೆದ ಎಲ್ಲ ಹೋರಾಟಗಳಲ್ಲೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಬೈರೇಗೌಡ ಅವರನ್ನು ಇದೀಗ ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದ್ದು ಸಂಘದ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿ ಕೈಗೊಳ್ಳುವಂತೆ ಆಶಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version