21.3 C
Sidlaghatta
Wednesday, July 16, 2025

ಅಕ್ಷರಾಭ್ಯಾಸ, ಶಾಲಾ ಸಂಸ್ಥಾಪಕರ ದಿನಾಚರಣೆ

- Advertisement -
- Advertisement -

Sidlaghatta : ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿ ಸಮಾಜದ ಮೇರು ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ ಎಂದು ಶ್ರೀಸಾಯಿ ಇಂಟರ್ ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ಕಾರ್ಯದರ್ಶಿ ಎಂ.ಮಂಜುನಾಥ್ ಅಭಿಪ್ರಾಯಪಟ್ಟರು.

ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ ಶ್ರೀ ಸಾಯಿ ಇಂಟರ್ ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಕ್ಷರಾಭ್ಯಾಸ, ಶಾಲಾ ಸಂಸ್ಥಾಪಕರ ದಿನಾಚರಣೆಯಲ್ಲಿ ಮಾತನಾಡಿದರು.

ವ್ಯಕ್ತಿತ್ವ ವಿಕಸನಕ್ಕೆ ಪೂರಕ ಅಂಶಗಳನ್ನು, ಗುಣಾತ್ಮಕ ಭಾವನೆ ಮೈಗೂಡಿಸಿ ವಿಶಿಷ್ಟ ಸಾಧನೆ ಮಾಡಬಲ್ಲ ಮನೋಬಲ ಹಾಗೂ ಸಹಕಾರವನ್ನು ಮಕ್ಕಳಿಗೆ ಒದಗಿಸಬೇಕೆಂದು ಪೋಷಕರಿಗೆ ಸಲಹೆ ನೀಡಿದರು.

ಶಾಲೆಯಲ್ಲಿ ನೀಡುವ ಶಿಕ್ಷಣ ಮಕ್ಕಳಲ್ಲಿ ಜೀವನ ನಿರ್ವಹಿಸುವ ಪಾಠವನ್ನು ಹೇಳಿಕೊಟ್ಟರೆ, ಮನೆಗಳಲ್ಲಿ ನೀಡುವ ಶಿಕ್ಷಣವು ಮಕ್ಕಳ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿರುತ್ತದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಉಪಯೋಗಿಸುವ ವ್ಯಕ್ತಿಗಳನ್ನಾಗಿ ರೂಪಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಶಾಲೆಯಲ್ಲಿ ವಿಶೇಷ ಪೂಜೆ, ಹೋಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಕ್ಷರಾಭ್ಯಾಸದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದ ಇನ್ನೂರಕ್ಕೂ ಹೆಚ್ಚಿನ ಪೋಷಕರು ತಮ್ಮ ನರ್ಸರಿ ಹಾಗೂ ಒಂದನೇ ತರಗತಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಎತ್ತಿಹಿಡಿಯುವ ಇಂತಹ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಲು ಪೋಷಕರು ತಮ್ಮ ಅಭಿಲಾಷೆ ವ್ಯಕ್ತಪಡಿಸಿದರು.

ಸಂಸ್ಥೆಯ ಅಧ್ಯಕ್ಷೆ ಜೆ.ದೀಪ, ಮುಖ್ಯ ಶಿಕ್ಷಕಿ ಅನುಷ, ಶಿಕ್ಷಕರಾದ ಶ್ರೀಕಾಂತ್, ಚಿಕ್ಕಣ್ಣ, ಶಶಿಕಲಾ, ಸತೀಶ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!