Home News ರೈತರಿಗೆ ಬೀಜೋಪಚಾರದ ಬಗ್ಗೆ ಮಾಹಿತಿ

ರೈತರಿಗೆ ಬೀಜೋಪಚಾರದ ಬಗ್ಗೆ ಮಾಹಿತಿ

0
sidlaghatta kothanur Seed Treatment Workshop for farmers

Kothanur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಜಿ ಕೆ ವಿ ಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರೈತರಿಗೆ ಬೀಜೋಪಚಾರ ಮಾಡುವ ವಿಧಾನಗಳು ಹಾಗೂ ಅದರ ಪ್ರಾಮುಖ್ಯತೆ ಕುರಿತು ಗುಂಪು ಚರ್ಚಾ ಸಭೆಯನ್ನು ಹಮ್ಮಿಕೊಂಡಿದ್ದರು.

ಸಭೆಯಲ್ಲಿ ರಾಗಿ, ದ್ವಿದಳ ಧಾನ್ಯಗಳು ಹಾಗೂ ಹೂವಿನ ಸಸಿಗಳಿಗೆ ಬೀಜೋಪಚಾರ ಮಾಡುವ ಮೂಲಕ ಬೆಳೆ ಹೆಚ್ಚಾಗುವುದು, ಬೀಜೋಪಚಾರ ಮಾಡುವುದರಿಂದ ತಡೆಯಬಹುದಾದ ರೋಗಗಳು, ಅದರ ಉಪಯೋಗಗಳ ಕುರಿತು ಮಾಹಿತಿ ನೀಡಿದರು.

ಸೂಕ್ಷ್ಮಾಣು ಜೀವಿಗಳಾದ ಅಜಾಸ್ಪಿರಿಲ್ಲಮ್, ರೈಜೋಬಿಯಂ ಅನ್ನು ಬಳಸುವುದರಿಂದ ಉತ್ತಮ ಗುಣಮಟ್ಟದ ಬೆಳೆಯನ್ನು ಪಡೆಯಬಹುದು ಎಂದು ವಿದ್ಯಾರ್ಥಿಗಳಾದ ಭೂಮಿಕಾ, ಭಕ್ತಿಶ್ರೀ, ಅರ್ಜುನ್ ಹಾಗೂ ಹರಿಪ್ರಸಾದ್ ವಿವರಿಸಿದರು.ಈ ಸಂದರ್ಭದಲ್ಲಿ ರೈತರೂ ತಮಗಿದ್ದ ಸಂದೇಹಗಳನ್ನು ಪರಿಹರಿಸಿಕೊಂಡರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version