
ಶ್ರಾವಣ ಮಾಸದ ಕಡೆಯ ಶನಿವಾರದಂದು ಶಿಡ್ಲಘಟ್ಟ ತಾಲ್ಲೂಕಿನ ನಾನಾ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಹಮ್ಮಿಕೊಂಡಿದ್ದು ಮಹಾ ಮಂಗಳಾರತಿ ಮಾಡಿ ತೀರ್ಥ ಪ್ರಸಾದಗಳನ್ನು ವಿನಿಯೋಗಿಸಲಾಯಿತು.
ಶಿಡ್ಲಘಟ್ಟ ತಾಲ್ಲೂಕಿನ ಚೌಡಸಂದ್ರದ ಶ್ರೀಪ್ರಸನ್ನಾಂಜನೇಯಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಕಡೆಯ ಶನಿವಾರದ ಅಂಗವಾಗಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಮಹಾ ಮಂಗಳಾರತಿ ಮಾಡಲಾಯಿತು.
ನಂತರ ತೀರ್ಥ ಪ್ರಸಾದವನ್ನು ವಿನಿಯೋಗಿಸಿ ಬಂದ ಎಲ್ಲ ಭಕ್ತರಿಗೂ ಅರ್ಚನೆ ಮಾಡಿ ಸುಖ ಶಾಂತಿ ನೆಮ್ಮದಿ ಆರೋಗ್ಯವನ್ನು ಆ ಭಗವಂತ ಕರುಣಿಸಲಿ ಎಂದು ಹರಸಲಾಯಿತು. ಭಗವಂತನ ದರ್ಶನ ಮಾಡಿದ ಭಕ್ತರು ಇಷ್ಟಾರ್ಥಗಳನ್ನು ಈಡೇರಿಸುವಂತೆ ಭಗವಂತನಲ್ಲಿ ಕೈ ಮುಗಿದು ಬೇಡಿಕೊಂಡರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi