16.6 C
Sidlaghatta
Thursday, January 8, 2026

ಮೊಬೈಲ್ ಆಪ್ ಮೂಲಕ ಏಳನೇ ಸಣ್ಣ ನೀರಾವರಿ ಗಣತಿ; ಕೆರೆ-ಕುಂಟೆಗಳ ರಕ್ಷಣೆಗೆ ತಹಶೀಲ್ದಾರ್ ಗಗನಸಿಂಧು ಕರೆ

- Advertisement -
- Advertisement -

Sidlaghatta : ಕೇಂದ್ರ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ನಿರ್ದೇಶನದಂತೆ ಏಳನೇ ಸಣ್ಣ ನೀರಾವರಿ ಗಣತಿಯನ್ನು ತಾಲ್ಲೂಕಿನಲ್ಲಿ ಮೊಬೈಲ್ ಆಪ್ ಮೂಲಕ ಹಮ್ಮಿಕೊಳ್ಳಲಾಗಿದ್ದು, ಅಧಿಕಾರಿಗಳು ನಿಖರವಾದ ಅಂಕಿ-ಅಂಶಗಳನ್ನು ಸಂಗ್ರಹಿಸಬೇಕು,” ಎಂದು ತಹಶೀಲ್ದಾರ್ ಎನ್.ಗಗನಸಿಂಧು ತಿಳಿಸಿದರು.

ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಕುಂಟೆಯ ಬಳಿ ಏಳನೇ ಸಣ್ಣ ನೀರಾವರಿ ಗಣತಿ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಅವರು ಮಾತನಾಡಿದರು. ಈ ಗಣತಿಯು ಜಲಮೂಲಗಳ ಸಂರಕ್ಷಣೆ ಮತ್ತು ಭವಿಷ್ಯದ ನೀರಾವರಿ ಯೋಜನೆಗಳ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಗಣತಿಯ ಉದ್ದೇಶ ಮತ್ತು ಪ್ರಯೋಜನಗಳು: ತಹಶೀಲ್ದಾರ್ ಅವರು ಗಣತಿಯ ಮಹತ್ವದ ಬಗ್ಗೆ ವಿವರಿಸುತ್ತಾ, “ನೀರಿನಾಸರೆಗಳ ಸಮಗ್ರ ಅಂಕಿ-ಅಂಶ ಸಂಗ್ರಹಣೆಯಿಂದ ನೀರಿನ ಸದ್ಬಳಕೆ, ಅಂತರ್ಜಲ ಪ್ರಮಾಣದ ಅಂದಾಜು ಮತ್ತು ಹೊಸ ನೀತಿ ನಿರೂಪಣೆ ಮಾಡಲು ಸಾಧ್ಯವಾಗುತ್ತದೆ. ಮುಖ್ಯವಾಗಿ ಒತ್ತುವರಿಯಾಗಿರುವ ಕೆರೆ-ಕುಂಟೆಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಲು ಈ ಗಣತಿ ಸಹಕಾರಿಯಾಗಲಿದೆ, ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ,” ಎಂದರು.

Sidlaghatta Tahsildar N. Gaganashindhu launching the 7th MI Census at Chikkadasarahalli pond

ಡಿಜಿಟಲ್ ಗಣತಿ: ಈ ಬಾರಿ ಗಣತಿ ಕಾರ್ಯವು ಸಂಪೂರ್ಣ ಡಿಜಿಟಲ್ ಆಗಿದ್ದು, ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ಸ್ಥಳದಲ್ಲೇ ಮೊಬೈಲ್ ಆಪ್ ಮೂಲಕ ಮಾಹಿತಿ ಅಪ್‌ಲೋಡ್ ಮಾಡಲಿದ್ದಾರೆ. ಇದಕ್ಕಾಗಿ ಸಿಬ್ಬಂದಿಗೆ ಈಗಾಗಲೇ ಸೂಕ್ತ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕರಾದ ಶಶಿಕುಮಾರ್, ವೇಣುಗೋಪಾಲ್, ಗ್ರಾಮ ಲೆಕ್ಕಿಗರಾದ ರೇವಣ್ಣಸಿದ್ದಪ್ಪ, ನಗದಾರ್, ತ್ರಿಮೂರ್ತಿ, ದೇವರಾಜ್ ಸೇರಿದಂತೆ ಹಲವು ಕಂದಾಯ ಅಧಿಕಾರಿಗಳು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!