Home News ವಿಕಲಚೇತನರಿಗೆ ಸಾಧನೆ ಸಲಕರಣೆ ವಿತರಣೆ

ವಿಕಲಚೇತನರಿಗೆ ಸಾಧನೆ ಸಲಕರಣೆ ವಿತರಣೆ

0

Sidlaghatta : ವಿಕಲಚೇತನರಿಗೆ ಅನುಕಂಪಕ್ಕಿಂತ ಅವಕಾಶಗಳನ್ನು ಕಲ್ಪಿಸಬೇಕಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ ಒತ್ತಿಹೇಳಿದರು.

ನಗರದ ಸ್ತ್ರೀಶಕ್ತಿ ಭವನದಲ್ಲಿ ಎಸ್.ಸಿ.ಐ. ನವಜೀವನ ಸೇವಾ ಸಂಘ, ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ, ಎಚ್.ಸಿ.ಎಲ್ ಫೌಂಡೇಶನ್, ಜಿಲ್ಲಾ ವಿಶೇಷಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಶಿಡ್ಲಘಟ್ಟದ ಎಂ.ಆರ್.ಡಬ್ಲೂ, ವಿ.ಆರ್.ಡಬ್ಲೂ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ವಿಶೇಷಚೇತನ ದಿನಾಚರಣೆ ಹಾಗೂ ಸಾಧನೆ ಸಲಕರಣೆ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅವರು, “ಅನೇಕ ವಿಕಲಚೇತನರು ತಮ್ಮ ಕಷ್ಟಗಳನ್ನು ಮೀರಿಸಿ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ. ಅವರ ಜೀವನ ನಮಗೆ ಮಾದರಿಯಾಗಬೇಕು. ವಿಕಲಚೇತನರಲ್ಲಿ ಇದ್ದ ವಿಶೇಷ ಕೌಶಲಗಳನ್ನು ಪೋಷಿಸಿ, ಮನೋಬಲ ಹೆಚ್ಚಿಸಿ, ಅವರು ತಮ್ಮ ಸ್ವಪ್ನಗಳನ್ನು ನನಸು ಮಾಡಿಕೊಳ್ಳುವಂತೆ ಪ್ರೋತ್ಸಾಹಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಈ ಸಮುದಾಯವನ್ನು ಹೆಚ್ಚು ಸಬಲಗೊಳಿಸಬೇಕಾಗಿದೆ” ಎಂದರು.

ಎಸ್.ಸಿ.ಐ. ನವಜೀವನ ಸೇವಾ ಸಂಘದ ಅಧ್ಯಕ್ಷ ಎನ್. ಮುನಿರಾಜು ಮಾತನಾಡುತ್ತಾ, “ವಿಶೇಷಚೇತನರಿಗಾಗಿ ವ್ಯಾಯಾಮ ತರಬೇತಿ ಕೇಂದ್ರ ಸ್ಥಾಪನೆ ಮಾಡಬೇಕು. ತಾಲ್ಲೂಕಿನ ಕೇಂದ್ರದಲ್ಲಿ ಒಂದು ಸಮರ್ಪಿತ ಭವನವನ್ನು ನಿರ್ಮಿಸಲು ಸಹಾಯಹಸ್ತ ನೀಡಬೇಕು. ಅಲ್ಲದೆ, ವಿಶೇಷಚೇತನರ ಸಮಸ್ಯೆಗಳನ್ನು ಪರಿಹರಿಸಲು ಕನಿಷ್ಠ ಮೂರು ತಿಂಗಳಿಗೊಮ್ಮೆ ಸಭೆಗಳನ್ನು ಆಯೋಜಿಸಬೇಕು. ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ನಿರ್ಮಾಣವಾಗುವ ರ್ಯಾಂಪ್‌ಗಳು ಮತ್ತು ಶೌಚಾಲಯಗಳು ವೈಜ್ಞಾನಿಕ ಮತ್ತು ಸುಲಭಪ್ರವೇಶನೀಯವಾಗಿರಬೇಕು” ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಶೇಷಚೇತನರಿಗೆ ಗಾಲಿಕುರ್ಚಿಗಳು, ಕ್ರಚ್ಚಸ್, ವಾಕರ್, ವಾಕಿಂಗ್ ಸ್ಟಿಕ್, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು, ಹಾಗೂ ಬೆನ್ನುಹುರಿ ಅಪಘಾತಕ್ಕೆ ಒಳಗಾದವರಿಗೆ ಅಗತ್ಯ ಔಷಧಿಗಳನ್ನು ವಿತರಿಸಲಾಯಿತು.

ನವಜೀವನ ಸಂಸ್ಥೆಯ ಅಧ್ಯಕ್ಷ ಬೆಳ್ಳೂಟಿ ಮುನಿರಾಜು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿ ನೌತಾಜ್, ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

Namma Sidlaghatta WhatsApp Channel

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version