Ajjakadirenahalli, sidlaghatta : ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿಯ ಅಜ್ಜಕದಿರೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೃಷ್ಣಪ್ಪ ಹಾಗೂ ಉಪಾಧ್ಯಕ್ಷೆಯಾಗಿ ಗಾಯಿತ್ರಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿ ಎಂ ಮಂಜುನಾಥ್ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಅಶ್ವತಪ್ಪ, ನಿಕಟ ಪೂರ್ವ ಅಧ್ಯಕ್ಷ ನರಸಿಂಹಪ್ಪ, ಉಪಾಧ್ಯಕ್ಷೆ ಗಾಯಿತ್ರಮ್ಮ, ಸಂಘದ ನಿರ್ದೇಶಕರಾದ ನಾರಾಯಣಪ್ಪ ಚನ್ನಕೃಷ್ಣಪ್ಪ, ಸಿ ನಾರಾಯಣಸ್ವಾಮಿ, ದ್ಯಾವಪ್ಪ, ಎನ್. ಛಾಯಾದೇವಿ, ರತ್ನಮ್ಮ, ಕೃಷ್ಣಮೂರ್ತಿ, ಗ್ರಾಮದ ಮುನಿಶಾಮಿ, ದ್ಯಾವಪ್ಪ, ನಾರಾಯಣಸ್ವಾಮಿ, ಚಂದ್ರಶೇಖರ್, ನರಸಿಂಹಮೂರ್ತಿ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ. ದೇವರಾಜ್ ಮತ್ತು ಗ್ರಾಮಸ್ಥರು ಹಾಜರಿದ್ದರು.








