Anur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂಟಿ ಗ್ರಾಮದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಕುಂಟೆ ಅಭಿವೃದ್ಧಿ ಕಾಮಗಾರಿ, ನಾಗಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಡಿಪಿನಾಯಕನಹಳ್ಳಿ ಗ್ರಾಮದ ಅಮೃತ ಸರೋವರ ಕಾಮಗಾರಿ, ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಯಾಪುರ ಗ್ರಾಮದ ಬೃಹತ್ ನೀರು ಸರಬರಾಜು ಟ್ಯಾಂಕ್ ಹಾಗೂ ಜಲ ಜೀವನ್ ಮಿಷನ್ ಯೋಜನೆಯಡಿ ಹೊಸಪೇಟೆ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ನೀರು ಸರಬರಾಜು ಆಗುವ ನಳ (ನಲ್ಲಿ) ಗಳನ್ನು ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾದೂರು ಗ್ರಾಮದ ಅಂಗನವಾಡಿ ಕೇಂದ್ರದ ಮಳೆ ನೀರು ಕೊಯ್ಲು ಕಾಮಗಾರಿ, ತಾದೂರು ಗ್ರಾಮದ ಮನೆ ಮನೆಗೆ ಭೇಟಿ ನೀಡಿ ನೀರು ಸರಬರಾಜು ಆಗುವ ನಳ (ನಲ್ಲಿ) ಗಳನ್ನು ಮತ್ತು ಬೃಹತ್ ನೀರು ಸರಬರಾಜು ಟ್ಯಾಂಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಎಇಇ ಲೋಕೇಶ, ಹೊಸಪೇಟೆ ಪಂಚಾಯಿತಿ ಪಿ.ಡಿ.ಒ ಯಮುನಾ ರಾಣಿ, ಮಳಮಾಚನಹಳ್ಳಿ ಪಿ.ಡಿ.ಒ ಶೈಲ, ತಾಲ್ಲೂಕು ತಾಂತ್ರಿಕ ಸಂಯೋಜಕ ನಾಗೇಂದ್ರ, ತಾಲ್ಲೂಕು ನರೇಗಾ ಸಂಯೋಜಕ ಲೋಕೇಶ, ಎಂಜಿನಿಯರ್ ವಿವೇಕ್, ಜೆಜೆಎಂ ಸಂಯೋಜಕ ಸಂತೋಷ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.