Home News ಹಾಳು ಬಾವಿಯಲ್ಲಿ ಬಿದ್ದ ಕೃಷ್ಣಮೃಗ ರಕ್ಷಣೆ

ಹಾಳು ಬಾವಿಯಲ್ಲಿ ಬಿದ್ದ ಕೃಷ್ಣಮೃಗ ರಕ್ಷಣೆ

0
Sidlaghatta Handiganala Black Buck Rescue

Handiganala, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿಯ ಪೈಲಹಳ್ಳಿಯಲ್ಲಿ ಗಜೇಂದ್ರ ಎಂಬುವರ ಜಮೀನಿನ ಹಾಳು ಬಾವಿಯಲ್ಲಿ ಬಿದ್ದಿದ್ದ ಕೃಷ್ಣಮೃಗದ ಮರಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ಭಾನುವಾರ ರಾತ್ರಿ ಕೃಷ್ಣಮೃಗದ ಮರಿಯೊಂದು ಗಜೇಂದ್ರ ಅವರ 80 ಅಡಿ ಆಳದ ಹಾಳು ಬಾವಿಗೆ ಬಿದ್ದಿದೆ. ಸೋಮವಾರ ಬೆಳಗ್ಗೆ ಅದನ್ನು ನೋಡಿದ ಗಜೇಂದ್ರ ಅರಣ್ಯ ಇಲಾಖೆಯವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಬಾವಿಯಲ್ಲಿ ಆರೋಗ್ಯವಾಗಿದ್ದ ಕೃಷ್ಣಮೃಗದ ಮರಿಯನ್ನು ಅವರು ನೋಡಿ, ಅಗ್ನಿಶಾಮಕ ದಳದವರಿಗೆ ವಿಷಯ ಮುಟ್ಟಿಸಿದ್ದಾರೆ. ಅವರು ಬಂದು ಬಾವಿಗೆ ಇಳಿದು ಮರಿಯನ್ನು ಸುರಕ್ಷಿತವಾಗಿ ಹೊರಗೆ ತಂದು ಅರಣ್ಯ ಇಲಾಖೆ ಸಿಬ್ಬಂದಿಗೆ ಒಪ್ಪಿಸಿದ್ದಾರೆ.

ಗಸ್ತುಅರಣ್ಯಪಾಲಕ ನವೀನ್ ಮತ್ತು ಸಿಬ್ಬಂದಿ ಮಾರೇಶ್, ರವಿಕಿರಣ್, ಅಗ್ನಿಶಾಮಕ ಅಧಿಕಾರಿಗಳಾದ ಕದಿರಪ್ಪ, ರಾಮಾಂಜಿನಪ್ಪ, ರೇವಣ್ಣ, ರಕ್ಷಿತ್, ಹರೀಶ್, ಅಶೋಕ, ಉಮೇಶ್, ಚಿದಂಬರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version