28.1 C
Sidlaghatta
Sunday, July 27, 2025

ಉಚಿತ ನೋಟ್‌ಪುಸ್ತಕಗಳ ವಿತರಣಾ ಕಾರ್ಯಕ್ರಮ

- Advertisement -
- Advertisement -

Cheemangala, Sidlaghatta : ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನೇಕ ತೊಡಕುಗಳಿದ್ದಾಗ್ಯೂ ಸರ್ಕಾರವು ಸಾಕಷ್ಟು ಸವಲತ್ತು, ಅವಕಾಶಗಳನ್ನು ಕಲ್ಪಿಸುತ್ತಿದೆ. ಸಂಘಸಂಸ್ಥೆಗಳೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದು ಎಲ್ಲಾ ಅವಕಾಶ, ಸೌಲಭ್ಯಗಳನ್ನೂ ಬಳಸಿಕೊಂಡು ಉನ್ನತ ದರ್ಜೆಯ ಸಿಕ್ಷಣವನ್ನು ಪಡೆಯಬೇಕು ಎಂದು ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್‌ಬಾಬು ತಿಳಿಸಿದರು.

ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತು, ಸಾಕ್ಷಿಮುರುಗನ್ ಸೇವಾ ಸಮಿತಿ, ಬಂಗಲೆ ಕುಟುಂಬದ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ನೋಟ್‌ಪುಸ್ತಕಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಗುರುಗಳ ಬಲದಿಂದ ಶಿಷ್ಯನು ಜ್ಞಾನವೆಂಬ ಅಮೃತ, ಆತ್ಮವಿದ್ಯೆಯನ್ನು ಗಳಿಸಲು ಸಾಧ್ಯ. ಗುರು ಹಿರಿಯರ ಬಗೆಗಿನ ಗೌರವದಿಂದ ಶ್ರೇಯೋಮಾರ್ಗಿಗಳೆಲ್ಲರೂ ಬದುಕಿನ ಸಾಧನೆ ಮಾಡಿದ್ದಾರೆ. ಶಾಲಾ ಶಿಕ್ಷಣವು ಜ್ಞಾನ ಪ್ರವಾಹಕ್ಕೆ ಬಳಸುವ ಉತ್ತಮ ಮಾಧ್ಯಮವಾಗಬೇಕು. ಶರಣರು ನೀಡಿದ ವಚನಗಳಲ್ಲಿ ಬದುಕಿನ ಮೌಲ್ಯಗಳಿವೆ ಎಂದರು.

ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಹಡಪದ್ ಮಾತನಾಡಿ, 12 ನೇ ಶತಮಾನದಲ್ಲಿ ನಡೆದ ಸಾಮಾಜಿಕ, ಅಧ್ಯಾತ್ಮ ಕ್ರಾಂತಿಯು ಜಗತ್ತಿನಲ್ಲಿ ಮಾದರಿಯಾದುದು. ವಿದ್ಯಾರ್ಥಿದಿಸೆಯಿಂದಲೇ ಮಕ್ಕಳು ವಚನಗಳನ್ನು ಓದಿ ಅರ್ಥೈಸಿಕೊಳ್ಳಬೇಕು, ಕಲಿಕೆಯಲ್ಲಿ ಹೆಚ್ಚು ಆಸಕ್ತಿ ತೋರಬೇಕು ಎಂದರು.

ವಿದ್ಯಾರ್ಥಿಗಳಿಗೆ ವಚನಗಾಯನ ನಡೆಸಿ ಬಹುಮಾನಗಳನ್ನು ವಿತರಿಸಲಾಯಿತು. ಉಚಿತ ನೋಟ್‌ ಪುಸ್ತಕಗಳನ್ನು ವಿತರಿಸಲಾಯಿತು.

ಮುಖ್ಯಶಿಕ್ಷಕ ಶಿವಶಂಕರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕ ಎಂ.ಶಿವಕುಮಾರ್, ಶ್ರೀನಿವಾಸ್, ನವೀನ್ ಹಾಜರಿದ್ದರು.

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!