Home News ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡಿ, ಸಾವಯವ ಕೃಷಿಯತ್ತ ಗಮನಹರಿಸಿ

ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡಿ, ಸಾವಯವ ಕೃಷಿಯತ್ತ ಗಮನಹರಿಸಿ

0
Sidlaghatta Chowdasandra Farmers Workshop

Chowdasandra, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೌಡಸಂದ್ರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ, ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರ ಚಿಕ್ಕಬಳ್ಳಾಪುರ ಹಾಗೂ ತೋಟಗಾರಿಕೆ ಇಲಾಖೆ ಶಿಡ್ಲಘಟ್ಟ ಇವರ ಸಹಯೋಗದಲ್ಲಿ, ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಡೆಯಿತು.

ಕೃಷಿ ವಿಜ್ಞಾನ ಕೇಂದ್ರ ಚಿಂತಾಮಣಿಯ (ಬೇಸಾಯ ಶಾಸ್ತ್ರ) ವಿಜ್ಞಾನಿ ವಿಶ್ವನಾಥ್ ಅವರು ಮಾತನಾಡಿ, ರೈತರು, ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿಕೊಂಡು, ಸಾವಯವ ಕೃಷಿಯತ್ತ ಗಮನಹರಿಸಿದರೆ, ಬೆಳೆಗಳಿಗೆ ತಗುಲಬಹುದಾದ ರೋಗಗಳನ್ನು ನಿಯಂತ್ರಣಕ್ಕೆ ತರುವುದರ ಜೊತೆಗೆ, ಭೂಮಿಯ ಫಲವತ್ತತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ. ಇದರ ಜೊತೆಗೆ ಉತ್ತಮ ಇಳುವರಿಯ ಬೆಳೆಗಳನ್ನೂ ಬೆಳೆಯಬಹುದಾಗಿದೆ ಎಂದು ಸಾವಯವ ಕೃಷಿಯ ಬಗ್ಗೆ ಮಾಹಿತಿಯನ್ನು ನೀಡಿದರು.

ತೋಟಗಾರಿಕಾ ವಿಜ್ಞಾನಿ ಆರ್. ಪ್ರವೀಣ್ ಕುಮಾರ ಅವರು ಮಾತನಾಡಿ, ತೋಟಗಾರಿಕಾ ಬೆಳೆಗಳಲ್ಲಿ ಇರುವ ನೂತನ ತಂತ್ರಜ್ಞಾನಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ಮುಂಗಾರು ಹಂಗಾಮಿಗೆ ರೈತರು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಉತ್ತಮ ಗುಣಮಟ್ಟದ ಬೀಜಗಳನ್ನು ಆಯ್ಕೆ ಮಾಡಬೇಕು, ಕಾಲಕ್ಕೆ ಸರಿಯಾಗಿ ಮಣ್ಣಿನ ಪರೀಕ್ಷೆ ಮಾಡಿಸಬೇಕು, ಸಾವಯವ ಕೃಷಿಗೆ ಒತ್ತು ನೀಡಬೇಕು. ಮಣ್ಣಿನ ಆರೋಗ್ಯ ಕಾಪಾಡುವುದು ಕೂಡಾ ತೋಟಗಾರಿಕೆ ಮತ್ತು ಕೃಷಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ರೈತರ ಖರ್ಚು ಕಡಿಮೆ ಮಾಡಿ, ಅವರ ಆದಾಯವನ್ನು ದ್ವಿಗುಣಗೊಳಿಸುವುದು ಕೇಂದ್ರ ಸರ್ಕಾರದ ಮೂಲ ಉದ್ದೇಶವಾಗಿದೆ. ನೈಸರ್ಗಿಕವಾಗಿ ಕೃಷಿ ಮಾಡುವ ಕಡೆಗೆ ಆಧ್ಯತೆ ನೀಡಬೇಕು ಎಂದರು.

ಗೃಹ ವಿಜ್ಞಾನ ವಿಜ್ಞಾನಿ ಸೌಮ್ಯ ಹಿರೇಗೌಡರ್ ಅವರು, ತರಕಾರಿ ಬೆಳೆಗಳ ಕಟಾವು ಮತ್ತು ಸಂಸ್ಕರಣೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.

ಪ್ರಗತಿಪರ ರೈತ ತ್ಯಾಗರಾಜ್ ಅವರು, ಸುಸ್ಥಿರ ಕೃಷಿಯಲ್ಲಿ ಸಾವಯುವ ಕೃಷಿಯ ಮಹತ್ವವನ್ನು ರೈತರಿಗೆ ಮನವರಿಕೆ ಮಾಡಿಕೊಟ್ಟರು. ಅದರಲ್ಲಿ ಪ್ರಮುಖವಾಗಿ ಜೀವಾಮೃತ, ಬೀಜಾಮೃತ, ಪಂಚಾಗವ್ಯ, ಹಸಿರೆಲೆ ಗೊಬ್ಬರದ ಮಹತ್ವ, ಮಣ್ಣು ಪರೀಕ್ಷೆ, ಪರಿಸರ ಸ್ನೇಹಿ ರೋಗ ಮತ್ತು ಕೀಟ ನಿರ್ವಹಣೆ, ಕೃಷಿ ವಿಶ್ವವಿದ್ಯಾಲಯದ ಬೀಜಗಳ ಆಯ್ಕೆ, ಬೀಜೋಪಚಾರ ಮತ್ತು ಇತರ ತಂತ್ರಜ್ಞಾನಗಳ ಬಗ್ಗೆ ಮಾಹಿತಿಯನ್ನು ರೈತರಿಗೆ ತಿಳಿಸಿ, ರೈತರ ಆದಾಯವನ್ನು ಜಾಸ್ತಿ ಮಾಡಲು ನೂತನ ತಂತ್ರಜ್ಞಾನಗಳ ಬಳಕೆ ಮತ್ತು ಸಾವಯುವ ಕೃಷಿ ಅತ್ಯಮೂಲ್ಯವೆಂದರು.

ಕೃಷಿ ಇಲಾಖೆಯ ಅಧಿಕಾರಿಗಳು ಇಲಾಖೆಯ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿಯನ್ನು ತಿಳಿಸಿಕೊಟ್ಟರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಅವರು, ತೋಟಗಾರಿಕಾ ಇಲಾಖೆಯ ಯೋಜನೆಗಳು ಮತ್ತು ಬೆಳೆ ವಿಮೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ರೇಷ್ಮೆ ಇಲಾಖೆಯಲ್ಲಿ ದೊರೆಯುವ ಸೌಲತ್ತಿನ ಬಗ್ಗೆ ರೈತರಿಗೆ ರೇಷ್ಮೆ ಇಲಾಖೆಯ ಅಧಿಕಾರಿಗಳು ಮಾಹಿತಿಯನ್ನು ರೈತರಿಗೆ ವಿವರಿಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version