Home News ಭದ್ರನಕೆರೆಯ ತಡೆಗೋಡೆಯಿಲ್ಲದ ರಸ್ತೆ: ವಾಹನ ಸವಾರರ ಜೀವಕ್ಕೆ ಹೊರೆ!

ಭದ್ರನಕೆರೆಯ ತಡೆಗೋಡೆಯಿಲ್ಲದ ರಸ್ತೆ: ವಾಹನ ಸವಾರರ ಜೀವಕ್ಕೆ ಹೊರೆ!

0
Sidlaghatta Dangerous lake drive

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯಿಂದ ವಿಜಯಪುರದ ಕಡೆಗೆ ಸಾಗುವ ಪ್ರಮುಖ ಹೆದ್ದಾರಿಯು ಭದ್ರನಕೆರೆಯ ಏರಿಯ ಮೇಲೆ ಹೋಗುತ್ತದೆ. ಈ ರಸ್ತೆಯಲ್ಲಿ ಒಂದು ಬದಿಯಲ್ಲಿ ಮಾತ್ರ ಕಬ್ಬಿಣದ ಸರಳಿನಿಂದ ತಡೆಗೋಡೆ ನಿರ್ಮಿಸಲಾಗಿದ್ದು, ಮತ್ತೊಂದು ಬದಿ ಸಂಪೂರ್ಣ ತೆರೆಯಾಗಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವುದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಸಂಬಂಧಪಟ್ಟ ಇಲಾಖೆ ತಕ್ಷಣದ ಕ್ರಮ ಕೈಗೊಂಡು ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪ್ರತಿದಿನ ಈ ರಸ್ತೆಯಲ್ಲಿ ಶಾಲಾ, ಕಾಲೇಜುಗಳ ವಾಹನಗಳು ಸೇರಿದಂತೆ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಕೆರೆಯ ಎತ್ತರದ ಏರಿಯಿಂದ ಕೆಳಗೆ ಸುಮಾರು 25 ಅಡಿಗಳಷ್ಟು ಆಳವಿದ್ದು, ತಡೆಗೋಡೆ ಇಲ್ಲದ ಭಾಗದಲ್ಲಿ ವೇಗವಾಗಿ ಸಂಚರಿಸುವ ವಾಹನಗಳು ಆಯತಪ್ಪಿ ರಸ್ತೆಯಿಂದ ಉರುಳುವ ಅಪಾಯವಿದೆ. ಈ ಮಾರ್ಗದಲ್ಲಿ ಈಗಾಗಲೇ ಲಾರಿಗಳು ರಸ್ತೆಯಿಂದ ಕೆಳಕ್ಕೆ ಉರುಳಿದ ಘಟನೆಗಳು ನಡೆದಿವೆ.

ರಾತ್ರಿ ವೇಳೆಯಲ್ಲಿ ರೈತರು ತಮ್ಮ ತೋಟಗಳಿಂದ ತರಕಾರಿ ಹಾಗೂ ಸೊಪ್ಪು ಸಾಗಿಸಲು ಈ ರಸ್ತೆಯನ್ನು ಬಳಸುತ್ತಿದ್ದು, ರಸ್ತೆಯ ತಿರುವುಗಳು ಸ್ಪಷ್ಟವಾಗಿ ಕಾಣದ ಕಾರಣದಿಂದ ಅಪಘಾತದ ಸಾಧ್ಯತೆ ಹೆಚ್ಚಾಗಿದೆ. ಕೆಲವೊಂದು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಸೂಸುವ ದೀಪಗಳಿಲ್ಲದ ಕಾರಣ, ರಸ್ತೆಯ ಪಕ್ಕಗಳು ಸ್ಪಷ್ಟವಾಗುವುದಿಲ್ಲ. ತಡೆಗೋಡೆ ಇಲ್ಲದ ಭಾಗದಲ್ಲಿ ವಾಹನಗಳನ್ನು ಎಷ್ಟು ದೂರ ಚಲಾಯಿಸಬಹುದು ಎಂಬುದು ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ.

ಚಾಲಕರಾದ ನಾಗಾರ್ಜುನ, ಅಂಬರೀಶ್, ನಿತಿನ್ ಅವರು ಈ ಬಗ್ಗೆ ಗಂಭೀರವಾಗಿ ಪ್ರತಿಕ್ರಿಯಿಸಿ, ಜಂಗಮಕೋಟೆಯ ಕಡೆಯಿಂದ ಆರಂಭಿಸಿ ವೆಂಕಟಾಪುರದ ಮೋರಿಯವರೆಗೂ ತಡೆಗೋಡೆ ನಿರ್ಮಿಸಲು ಸಂಬಂಧಪಟ್ಟ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸಮಯಕ್ಕೆ ಮುನ್ನ ತಡೆಗೋಡೆ ನಿರ್ಮಿಸಲಾಗದಿದರೆ, ಇದು ಭವಿಷ್ಯದಲ್ಲಿ ಪ್ರಾಣಾಪಾಯವನ್ನುಂಟುಮಾಡುವ ದುರ್ಘಟನೆಗಳಿಗೆ ಕಾರಣವಾಗಬಹುದು ಎನ್ನುವುದು ಅವರ ಎಚ್ಚರಿಕೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version