18.1 C
Sidlaghatta
Monday, December 8, 2025

ದೇವರಮಳ್ಳೂರು ಗ್ರಾಮದಲ್ಲಿ ಮಳ್ಳೂರಾಂಭ ದೇವಿಯ ರಥೋತ್ಸವ

- Advertisement -
- Advertisement -

Devaramallur, Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಗುರುವಾರ ಮಳ್ಳೂರಾಂಭ ದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಅತ್ಯಂತ ಪುರಾತನ ದೇವಾಲಯವಾದ ಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ಧವಾಗಿದ್ದು, ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಜನರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ರಥವನ್ನು ಎಳೆದರು. ದೇವರನ್ನು ವಿಶೇಷವಾಗಿ ಅಲಂಕರಿಸಿದ್ದರು. ಬ್ರಹ್ಮರಥೋತ್ಸವಕ್ಕೆ ರಥವನ್ನು ವಿಶೇಷವಾಗಿ ಅಲಂಕರಿಸಿ ದಾರಿಯುದ್ದಕ್ಕೂ ತಳಿರು ತೋರಣಗಳಿಂದ ಸಿಂಗರಿಸಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ಗಾರುಡಿಬೊಂಬೆ, ಕೀಲುಕುದುರೆ, ವೀರಗಾಸೆ, ತಮಟೆ ವಾದನ ಆಕರ್ಷಕವಾಗಿತ್ತು. ತಿಂಡಿ ತಿನಿಸುಗಳು, ಆಟಿಕೆಗಳು, ಅಚ್ಚೆ ಹಾಕುವವರು, ದಿನೋಪಯೋಗಿ ವಸ್ತುಗಳು ಸೇರಿದಂತೆ ಬಹುತೇಕ ಅಂಗಡಿಗಳು ತೆರೆದಿದ್ದು ಜನಾಕರ್ಷಕವಾಗಿದ್ದವು.

ತಹಶೀಲ್ದಾರ್ ಗಗನಸಿಂಧು ಮತ್ತು ಶಾಸಕ ಬಿ.ಎನ್.ರವಿಕುಮಾರ್ ರಥೋತ್ಸವಕ್ಕೆ ಚಾಲನೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ಕಾಂಗ್ರೆಸ್ ಮುಖಂಡ ಕೆ.ಪಿ.ಸಿ.ಸಿ ಕೋ ಆರ್ಡಿನೇಟರ್ ರಾಜೀವ್ ಗೌಡ, ದೇವಾಲಯ ಸೇವಾ ಸಮಿತಿ ಅಧ್ಯಕ್ಷ ಮುನಿರಾಜುಗೌಡ, ಕಾರ್ಯದರ್ಶಿ ವಿ.ವೇಣುಗೋಪಾಲ, ವಿ.ಸುಬ್ರಮಣಿಯಪ್ಪ, ಬಿ.ಎಲ್.ಮುನಿರಾಜು, ಶಾಂತಮ್ಮ ಕೆಂಪಣ್ಣ, ಎಂ.ವೆಂಕಟೇಶ್, ಟಿ.ಎಂ.ವೆಂಕಟೇಶಪ್ಪ, ಎನ್.ರಾಕೇಶ್, ದೇವರ ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರ ದೇವರಾಜ್, ಸದಸ್ಯರಾದ ಎನ್, ವೆಂಕಟೇಶ್, ಕೆಂಪೇಗೌಡ, ಅರ್ಚಕ ಹರೀಶ್ ಸ್ವಾಮಿ, ವೆಂಕೋಬರಾವ್, ಕೆ.ನಾಗರಾಜು, ಸೊಣ್ಣೇನಹಳ್ಳಿ ಮೂರ್ತಿ, ಜಿ.ಚಂದ್ರಪ್ರಸಾದ್ ಸೇರಿದಂತೆ ಗ್ರಾಮಸ್ಥರು ಪೂಜಾಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Namma Sidlaghatta WhatsApp Channel

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!