Home News ದಸಂಸ ತಾಲ್ಲೂಕು ಪದಾಧಿಕಾರಿಗಳ ಸಮಿತಿ ವಿಸರ್ಜಿಸಲು ಜಿಲ್ಲಾ ಸಮಿತಿ ಆದೇಶ

ದಸಂಸ ತಾಲ್ಲೂಕು ಪದಾಧಿಕಾರಿಗಳ ಸಮಿತಿ ವಿಸರ್ಜಿಸಲು ಜಿಲ್ಲಾ ಸಮಿತಿ ಆದೇಶ

0
Sidlaghatta DSS District Committee Meeting

Sidlaghatta : ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಕೆಲ ಪದಾಧಿಕಾರಿಗಳು ಸಂಘಟನೆಯ ಆಂತರಿಕ ಶಿಸ್ತನ್ನು ಉಲ್ಲಂಘನೆ ಮಾಡಿ ಸಂಘಟನೆಯ ತತ್ವ, ಸಿದ್ದಂತಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ದಸಂಸ ತಾಲ್ಲೂಕು ಸಂಚಾಲಕ ತಾತಹಳ್ಳಿ ಟಿ.ಎ.ಚಲಪತಿ ಮತ್ತಿತರ ಪದಾಧಿಕಾರಿಗಳ ಸಮಿತಿಯನ್ನು ವಿಸರ್ಜಿಸಲು ದಸಂಸ ಜಿಲ್ಲಾ ಸಮಿತಿ ಆದೇಶಿಸಿದೆ.

ದಸಂಸ ರಾಜ್ಯ ಸಮಿತಿಯ ಮುಖಂಡ ಎನ್.ವೆಂಕಟೇಶ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ದಸಂಸ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ಶಿಡ್ಲಘಟ್ಟ ತಾಲ್ಲೂಕು ಸಮಿತಿ ವಿಸರ್ಜನೆಗೆ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

ದಸಂಸ ತಾಲ್ಲೂಕು ಸಂಚಾಲಕ ತಾತಹಳ್ಳಿ ಟಿ.ಎ.ಚಲಪತಿ ಸೇರಿದಂತೆ ಕೆಲ ಪದಾಧಿಕಾರಿಗಳು ತಾಲ್ಲೂಕಿನ ಜಂಗಮಕೋಟೆ ವ್ಯಾಪ್ತಿಯ 13 ಹಳ್ಳಿಗಳ ಕೆಐಎಡಿಬಿ ಭೂ ಸ್ವಾಧೀನದ ವಿಚಾರದಲ್ಲಿ ಸಂಘಟನೆಯ ಆಂತರಿಕ ಶಿಸ್ತನ್ನು ಉಲ್ಲಂಘಟನೆ ಮಾಡುವ ಜೊತೆಗೆ ಸಂಘಟನೆಯ ತತ್ವ ಸಿದ್ದಾಂತಗಳಿಗೆ ವಿರುದ್ದವಾಗಿ ನಡೆದುಕೊಳ್ಳುತಿರುವ ಬಗ್ಗೆ ದಸಂಸ ರಾಜ್ಯ ಮುಖಂಡರೂ ಸೇರಿದಂತೆ ಜಿಲ್ಲಾಧ್ಯಕ್ಷರ ಜೊತೆ ಸುಧೀರ್ಘ ಚರ್ಚೆ ನಡೆಸಿ ದಸಂಸ ತಾಲ್ಲೂಕು ಸಂಚಾಲಕ ಟಿ.ಎ.ಚಲಪತಿ ನೇತೃತ್ವದ ತಾಲ್ಲೂಕು ಸಮಿತಿ ವಿಸರ್ಜಿಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ದಸಂಸ ಹಿರಿಯ ಮುಖಂಡ ಕೆ.ಸಿ.ರಾಜಾಕಾಂತ್, ಜಿಲ್ಲಾ ಸಂಚಾಲಕ ಸಿ.ಜಿ.ಗಂಗಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ ಬಿ.ವಿ.ವೆಂಕಟರವಣ, ಎನ್.ಎ.ವೆಂಕಟೇಶ್, ಜಿಲ್ಲಾ ಖಜಾಂಚಿ ಜಿ.ವಿ.ಗಂಗಪ್ಪ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version