Home News ಶಿಡ್ಲಘಟ್ಟ ತಾಲ್ಲೂಕಿನ ಸಮಗ್ರ ಕೃಷಿ ಸಾಧಕರಿಗೆ ರಾಜ್ಯ ಮಟ್ಟದ ಕೆಂಪೇಗೌಡ ರತ್ನ ಪ್ರಶಸ್ತಿ

ಶಿಡ್ಲಘಟ್ಟ ತಾಲ್ಲೂಕಿನ ಸಮಗ್ರ ಕೃಷಿ ಸಾಧಕರಿಗೆ ರಾಜ್ಯ ಮಟ್ಟದ ಕೆಂಪೇಗೌಡ ರತ್ನ ಪ್ರಶಸ್ತಿ

0
Sidlaghatta Farmer Kempegowda Ratna Award

Sidlaghatta : ನಾಡಪ್ರಭು ಕೆಂಪೇಗೌಡರ 516 ನೇ ಜನ್ಮ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ನಡೆದ ಸನ್ಮಾನದಲ್ಲಿ ಶಿಡ್ಲಘಟ್ಟದ ಸಮಗ್ರ ಕೃಷಿ ಸಾಧಕ ಹಿತ್ತಲಹಳ್ಳಿ ಗೋಪಾಲಗೌಡ ಅವರಿಗೆ “ಕೆಂಪೇಗೌಡ ರತ್ನ” ಪ್ರಶಸ್ತಿ ನೀಡಿ ಸತ್ಕರಿಸಲಾಗಿದೆ.

ಅಖಿಲ ಭಾರತ ಒಕ್ಕಲಿಗರ ಮಹಾಸಭಾ, ಕರ್ನಾಟಕ ರಾಜ್ಯ ನವ ನಿರ್ಮಾಣ ವಕೀಲರ ಕ್ಷೇಮಾಭಿವೃದ್ದಿ ಸಂಘವು ಬೆಂಗಳೂರು ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನ ಅಲುಮಿನಿ ಅಸೋಸಿಯೇಷನ್‌ ನ ಆಫ್ ಯೂನಿವರ್ಸಟಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಗ್ರ ಕೃಷಿಯಲ್ಲಿ ಅಪಾರ ಸಾಧನೆ ಮಾಡಿದ ಈಗಾಗಲೆ ಕೃಷಿ ಪಂಡಿತ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದ ಗೋಪಾಲಗೌಡರಿಗೆ ಕೆಂಪೇಗೌಡ ರತ್ನ ಪ್ರಶಸ್ತಿಯನ್ನು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ಜಗದ್ಗುರು ನಿಶ್ಚಲಾನಂದ ಸ್ವಾಮಿ, ಸುಪ್ರೀಂ ಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಅಖಿಲ ಭಾರತ ಒಕ್ಕಲಿಗರ ಮಹಾಸಭಾದ ಅಧ್ಯಕ್ಷ ಬಿ.ವಿ.ಮಂಜುನಾಥಗೌಡ, ಕರ್ನಾಟಕ ರಾಜ್ಯ ನವ ನಿರ್ಮಾಣ ವಕೀಲರ ಕ್ಷೇಮಾಭಿವೃದ್ದಿ ಸಂಘ ಅಧ್ಯಕ್ಷ ಸಿ.ಎಸ್.ರಾಮಮೂರ್ತಿರಾವ್ ನೀಡಿ ಸತ್ಕರಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version