Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹೊಸಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೆ.ಎನ್. ರೇಖಾರಾಣಿ ಅವರು ರಾಜ್ಯಮಟ್ಟದ “ಶಿಕ್ಷಕ ರತ್ನ” ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಕಲಾಸಂಕುಲ ಸಂಸ್ಥೆಯು ನೀಡಿದ ಈ ಪ್ರಶಸ್ತಿಯನ್ನು ಇತ್ತೀಚೆಗೆ ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಸರ್ಕಾರಿ ನೌಕರರ ಜಾನಪದ ನೃತ್ಯದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಶಿಕ್ಷಕಿ ಎನ್. ಶೈಲಜಾ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ನಂದೀಶ್ ಅವರನ್ನು ಕೂಡ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಲಾಸಂಕುಲ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ್, ಕಾರ್ಯದರ್ಶಿ ಮಾರುತಿ ಬಡಿಗೇರ್, ಮುಖ್ಯ ಶಿಕ್ಷಕಿ ಜಿ.ಎನ್. ನೇತ್ರಾವತಿ ಹಾಗೂ ಶಿಕ್ಷಕಿ ಪದ್ಮಜಾ ಉಪಸ್ಥಿತರಿದ್ದರು.








