23.1 C
Sidlaghatta
Tuesday, February 3, 2026

ಐದು ಗ್ಯಾರಂಟಿಗಳ ಬಲದಿಂದ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲವ ನಿರೀಕ್ಷೆ

- Advertisement -
- Advertisement -

Sidlaghatta : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು, ಬಸವಣ್ಣನವರ ಆದರ್ಶಗಳು ಮತ್ತು ಅಂಬೇಡ್ಕರರ ಆಶಯಗಳನ್ನು ಉಳಿಸಿಕೊಂಡು ಜನರ ಮನಸ್ಸು ಗೆದ್ದಿವೆ. ಈ ಸಾಧನೆಗಳನ್ನು ಜನರಿಗೆ ವಿವರಿಸುವ ಮೂಲಕ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಗೆಲ್ಲಿಸಲು ಪಣತೊಡಬೇಕು ಎಂದು KPCC ಕೋಆರ್ಡಿನೇಟರ್ ರಾಜೀವ್ ಗೌಡ ಕರೆ ನೀಡಿದರು.

ತಾಲ್ಲೂಕಿನ ಭಕ್ತರಹಳ್ಳಿ, ಮಳಮಾಚನಹಳ್ಳಿ, ನಾಗಮಂಗಲ, ಮತ್ತು ಹೊಸಪೇಟೆ ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಹಾಗೂ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಈ ಬಾರಿ ಗ್ರಾಮ ಪಂಚಾಯಿತಿಗಳ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. “ಎಲ್ಲರ ಉದ್ದೇಶ ಒಂದೇ – ನಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಜಯಶೀಲರನ್ನಾಗಿಸುವುದು,” ಎಂದು ರಾಜೀವ್ ಗೌಡ ಹೇಳಿದರು.

“ರಾಜ್ಯ ಸರ್ಕಾರದ ಗ್ಯಾರಂಟಿಗಳು, ಅಭಿವೃದ್ಧಿ ಕಾರ್ಯಗಳು, ಮತ್ತು ಸರ್ವತ್ರ ಕಾರ್ಯಕ್ರಮಗಳ ಯಶಸ್ಸನ್ನು ಮತದಾರರಿಗೆ ವಿವರಿಸಿ ಪ್ರಚಾರ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಬಲವನ್ನು ಹೆಚ್ಚಿಸುವ ಮೂಲಕ ಮುಂದಿನ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ಚುನಾವಣೆಗೆ ತಯಾರಾಗೋಣ,” ಎಂದು ಗೌಡ ಹುರಿಯಳಿಸಿದರು.

ಚುನಾವಣೆ ಎದುರಿಸಲು ಬೇಕಾದ ಯೋಜನೆಗಳು ಮತ್ತು ಪ್ರಚಾರದ ತಂತ್ರಗಳು ಸಭೆಯಲ್ಲಿ ಚರ್ಚಿಸಲ್ಪಟ್ಟವು. ಎಲ್ಲ ಕ್ಷೇತ್ರಗಳ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ತಮ್ಮ ವಲಯದಲ್ಲಿ ಮತದಾರರೊಂದಿಗೆ ನಿಕಟ ಸಂಪರ್ಕ ಬೆಳೆಸಿ ಮತದಾನಕ್ಕೆ ಪ್ರೇರೇಪಿಸಬೇಕು ಎಂಬ ಸೂಚನೆ ನೀಡಲಾಯಿತು.

ಭಕ್ತರಹಳ್ಳಿ, ಮಳಮಾಚನಹಳ್ಳಿ, ನಾಗಮಂಗಲ, ಮತ್ತು ಹೊಸಪೇಟೆಯ ಗ್ರಾ.ಪಂ. ವ್ಯಾಪ್ತಿಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಎಲ್ಲಾ ಅಭ್ಯರ್ಥಿಗಳು ಸಭೆಗೆ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!