24.6 C
Sidlaghatta
Monday, October 13, 2025

ಬಾವಿಯೊಳಗೆ ಬಿದ್ದ ಯುವಕನನ್ನು ಮೇಲೆತ್ತಲು ಅಗ್ನಿಶಾಮಕ ದಳದ ಹರಸಾಹಸ

- Advertisement -
- Advertisement -

ಕೈಯ್ಯಿಂದ ಜಾರಿದ ಮೊಬೈಲ್ ಫೋನ್ ಬಾವಿಯೊಳಗೆ ಬಿದ್ದಿದ್ದು, ಮೊಬೈಲ್‌ನ್ನು ಎತ್ತಿಕೊಳ್ಳಲೆಂದು ಯುವಕ ಬಾವಿಯೊಳಗೆ ಇಳಿದಿದ್ದಾನೆ. ಜತೆಯಲ್ಲಿ ಯಾರೂ ಇಲ್ಲದೆ ಒಬ್ಬನೆ ಬಾವಿಗೆ ಇಳಿದಿದ್ದು ಕಾಲು ಜಾರಿ ಬಿದ್ದ ಪರಿಣಾಮ ಯುವಕ ಮೇಲೆ ಬರಲಾಗದೆ ಬಾವಿಯೊಳಗೆ ಸಿಲುಕಿದ್ದಾನೆ. ಆತನನ್ನು ಮೇಲೆತ್ತಲು ಅಗ್ನಿಶಾಮಕ ಸಿಬ್ಬಂದಿಯು ಶನಿವಾರ ಮದ್ಯಾಹ್ನದಿಂದ ಹರಸಾಹಸ ಪಡುತ್ತಿದ್ದಾರೆ.

 ತಾಲ್ಲೂಕಿನ ಅಬ್ಲೂಡು ಗ್ರಾಮಪಂಚಾಯಿತಿಯ ಗುಡಿಹಳ್ಳಿಯಲ್ಲಿ 35 ವರ್ಷದ ಅನಿಲ್ ಕುಮಾರ್ ಎಂಬಾತನು ತೋಟದಲ್ಲಿನ ಶೆಡ್ ಬಳಿ ಕೆಲಸ ಮಾಡುವಾಗ ಮೊಬೈಲ್ ಜಾರಿ ಶೆಡ್ ಒಳಗಿರುವ ಕಿರು ಬಾವಿಯಲ್ಲಿ ಬಿದ್ದಿದೆ. ಬಾವಿಯೊಳಗೆ ಬಿದ್ದ ಮೊಬೈಲ್‌ನ್ನು ತೆಗೆದುಕೊಳ್ಳಲು ಅನಿಲ್ ಕುಮಾರ್ ಒಬ್ಬನೆ ಶೆಡ್‌ ಒಳಗಿನ ಕಿರು ಬಾವಿಗೆ ಇಳಿದಿದ್ದಾನೆ. ಆದರೆ ಕಾಲು ಜಾರಿದ್ದರಿಂದ ಆತ ಬಾವಿಯಿಂದ ಮೇಲೆ ಬರಲಾಗದೆ ಅಲ್ಲೆ ಸಿಲುಕಿದ್ದಾನೆ.

ಬೆಳಗ್ಗೆ ಮನೆಯಿಂದ ಹೊರ ಹೋದವನು ಮದ್ಯಾಹ್ನ ಊಟದ ಸಮಯವಾದರೂ ಬರಲಿಲ್ಲ ಎಂದು ಮನೆಯವರು ಅನಿಲ್ ಕುಮಾರ್‌ನನ್ನು ಹುಡುಕಿಕೊಂಡು ತೋಟದ ಬಳಿ ಬಂದಾಗ ಕಿರು ಬಾವಿಯ ಬಳಿ ಹಗ್ಗ ಇಳಿ ಬಿಟ್ಟಿರುವುದು ಕಂಡು ಬಂದಿದೆ.

ಅಲ್ಲಿಯೆ ಅನಿಲ್ ಕುಮಾರ್‌ನ ಚಪ್ಪಲಿಗಳು ಸಹ ಕಾಣಿಸಿದ್ದು ಅನುಮಾನಗೊಂಡು ಅನಿಲ್ ಕುಮಾರ್‌ನ ಅಣ್ಣನೂ ಬಾವಿಯೊಳಗೆ ಇಳಿಯುವ ಪ್ರಯತ್ನ ಮಾಡಿದ್ದಾನೆ. ಆದರೆ ಉಸಿರುಗಟ್ಟಿ ಇಳಿಯಲು ಸಾಧ್ಯವಾಗದೆ ಮೇಲೆ ಬಂದಿದ್ದಾನೆ.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಅನಿಲ್ ಕುಮಾರ್‌ನನ್ನು ಮೇಲೆತ್ತಲು ಹರಸಾಹಸ ಪಡುತ್ತಿದ್ದಾರೆ. ಕಿರುಬಾವಿಯೊಳಗೆ ಕತ್ತಲು ಕವಿದಿದ್ದು 15 ಅಡಿಗಳ ಆಳಕ್ಕೆ ಉಸಿರುಗಟ್ಟುವ ವಾತಾವರಣವು ಕಾರ‍್ಯಾಚರಣೆಗೆ ಅಡ್ಡಿಯಾಗುತ್ತಿದೆ.

ಸ್ಕ್ಯಾನರ್ ಮೂಲಕ ಕಿರು ಬಾವಿಯೊಳಗೆ ಹುಟುಕಾಟ ನಡೆಸಿದ್ದು ಬಾವಿಯ ಒಳಗೆ ನಿತ್ರಾಣಗೊಂಡು ಕುಳಿತಂತೆ ಕಾಣಿಸಿದ್ದಾನೆ ಎನ್ನಲಾಗುತ್ತಿದ್ದು ಆತನನ್ನು ಮೇಲಕ್ಕೆತ್ತುವ ಎಲ್ಲ ರೀತಿಯ ಸಾಧ್ಯಾಸಾಧ್ಯತೆಗಳ ಬಗ್ಗೆಯೂ ಗಮನ ಹರಿಸಲಾಗುತ್ತಿದೆ. ಕುಟುಂಬದವರು, ಗ್ರಾಮಸ್ಥರು ಹಾಗೂ ನೆರೆ ಹೊರೆಯವರು ಜಮಾವಣೆಯಾಗುತ್ತಿದ್ದು ಕ್ಷಣ ಕ್ಷಣಕ್ಕೂ ಕುತೂಹಲ ಆತಂಕ ಮನೆ ಮಾಡುತ್ತಿದೆ.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!